ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್.11 : : ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಮಾದಿಗ ಜನಾಂಗಕ್ಕೆ ಸೇರಿದ ಚಿತ್ರದುರ್ಗ ತಾಲ್ಲೂಕಿನ ಸೂರನಹಳ್ಳಿ ವಿಜಯಣ್ಣನಿಗೆ ಟಿಕೇಟ್ ನೀಡುವಂತೆ ಅಪಾರ ಅಭಿಮಾನಿಗಳು ಬಿಜೆಪಿ ವರಿಷ್ಟರಲ್ಲಿ ಮನವಿ ಮಾಡಿದ್ದಾರೆ.
2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸೂರನಹಳ್ಳಿ ವಿಜಯಣ್ಣ ಟಿಕೆಟ್ ಕೇಳಿದ್ದರು. ಆದರೆ ಪಕ್ಷದ ನಾಯಕರು ಎ.ನಾರಾಯಣಸ್ವಾಮಿರವರನ್ನು ಚುನಾವಣಾ ಕಣಕ್ಕೆ ಇಳಿಸಿದ್ದರಿಂದ ಅವರ ಪರವಾಗಿ ಕೆಲಸ ಮಾಡಿದ್ದಲ್ಲದೆ. ಅಂದಿನಿಂದ ಇಲ್ಲಿಯತನಕ ಕ್ಷೇತ್ರಾದ್ಯಂತ ಸುತ್ತಾಡಿ ಮತದಾರರ ಮನಗೆದ್ದಿದ್ದಾರೆ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಸೂರನಹಳ್ಳಿ ವಿಜಯಣ್ಣನಿಗೆ ಟಿಕೆಟ್ ನೀಡಿ ಮಾದಿಗ ಜನಾಂಗಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತೆ ಅವರ ನೂರಾರು ಅಭಿಮಾನಿಗಳು ವರಿಷ್ಟರನ್ನು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















