Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಮಾಶ್ರೀಗೆ ತೇರದಾಳ ಟಿಕೆಟ್ ನೀಡದಂತೆ ಸ್ವಾಮೀಜಿಗಳ ಒತ್ತಾಯ : ಕಾರಣ ಏನು ಗೊತ್ತಾ..?

---Advertisement---

ಬಾಗಲಕೋಟೆ: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಈಗಾಗಲೇ ಎರಡನೇ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಬಾರಿ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಅಳೆದು, ತೂಗಿ, ಅಭ್ಯರ್ಥಿಗಳ ಬಲಾ, ಬಲಾಢ್ಯತೆಯನ್ನು ಗಮನಿಸಿ ಟಿಕೆಟ್ ಕೊಟ್ಟಿದೆ. ಆದರೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಲವರಿಗೆ ಟಿಕೆಟ್ ಸಿಕ್ಕಿಲ್ಲ. ಟಿಕೆಟ್ ಸಿಗದವರು ಈಗಾಗಲೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಅದರಲ್ಲಿ ನಟಿ ಉಮಾಶ್ರೀ ಕೂಡ ಒಬ್ಬರು. ಈ ಬಾರಿ ತೇರದಾಳ ಕ್ಷೇತ್ರಕ್ಕೆ ಉಮಾಶ್ರೀ ಅವರ ಹೆಸರು ರಿಜಿಸ್ಟರ್ ಆಗಿಲ್ಲ. ಹೀಗಾಗಿ ಉಮಾಶ್ರೀ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ಆದರೆ ತೇರದಾಳ ಕ್ಷೇತ್ರಕ್ಕೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟಕ್ಕೂ ಸ್ವಾಮೀಜಿಗಳು ಆ ರೀತಿ ಪಟ್ಟು ಹಿಡಿಯಲು ಕಾರಣವಾದರೂ ಏನು..? ಅಭಿನವ ರೇವಣ್ಣ ಸಿದ್ದೇಶ್ವರ ಶ್ರೀ, ಮೃತ್ಯುಂಜಯ ಶ್ರೀ, ಪಂಎಇತ್ ಪಟ್ಟಣ್ ಶ್ರೀ, ಮಲ್ಲಪ್ಪ ಬಾವಿಕಟ್ಟೆ ಹಾಗೂ ಚಂದ್ರಶೇಖರ ಶಿವಪೂಜಿ ಶ್ರೀಗಳು ಈ ರೀತಿ ಒತ್ತಾಯ ಮಾಡುತ್ತಿದ್ದಾರೆ.

ಸ್ವಾಮೀಜಿಗಳೆಲ್ಲಾ ಈ ಬಾರಿಯ ವಿಧಾನಸಭಾ ಚುನಾವಣೆಗೆ ಡಾ ಮಲ್ಲೇಶಪ್ಪ ಎಸ್ ದಡ್ಡೇನವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಟಿ ನಡೆಸಿ, ತೇರದಾಳದಲ್ಲಿ 60 ಸಾವಿರ ಹಟಗಾರ ಲಿಂಗಾಯತರಿದ್ದಾರೆ. ಬಹಳ ವರ್ಷದಿಂದಾನೂ ಕಾಂಗ್ರೆಸ್ ಜೊತೆಗೆ ಇದೆ. ಉಮಾಶ್ರೀ ಅವರಿಗೆ ಟಿಕೆಟ್ ನೀಡಿದರೆ ನಮಗೆ ಅಭ್ಯಂತರವೇನು ಇಲ್ಲ. ಆದರೆ ಅವರು ಗೆದ್ದು ಈಗಾಗಲೇ ಸಚಿವೆಯಾಗಿದ್ದಾರೆ. ಯುವಕರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...