Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಮಾಶ್ರೀಗೆ ತೇರದಾಳ ಟಿಕೆಟ್ ನೀಡದಂತೆ ಸ್ವಾಮೀಜಿಗಳ ಒತ್ತಾಯ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ಬಾಗಲಕೋಟೆ: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಈಗಾಗಲೇ ಎರಡನೇ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಬಾರಿ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಅಳೆದು, ತೂಗಿ, ಅಭ್ಯರ್ಥಿಗಳ ಬಲಾ, ಬಲಾಢ್ಯತೆಯನ್ನು ಗಮನಿಸಿ ಟಿಕೆಟ್ ಕೊಟ್ಟಿದೆ. ಆದರೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಲವರಿಗೆ ಟಿಕೆಟ್ ಸಿಕ್ಕಿಲ್ಲ. ಟಿಕೆಟ್ ಸಿಗದವರು ಈಗಾಗಲೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಅದರಲ್ಲಿ ನಟಿ ಉಮಾಶ್ರೀ ಕೂಡ ಒಬ್ಬರು. ಈ ಬಾರಿ ತೇರದಾಳ ಕ್ಷೇತ್ರಕ್ಕೆ ಉಮಾಶ್ರೀ ಅವರ ಹೆಸರು ರಿಜಿಸ್ಟರ್ ಆಗಿಲ್ಲ. ಹೀಗಾಗಿ ಉಮಾಶ್ರೀ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ಆದರೆ ತೇರದಾಳ ಕ್ಷೇತ್ರಕ್ಕೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟಕ್ಕೂ ಸ್ವಾಮೀಜಿಗಳು ಆ ರೀತಿ ಪಟ್ಟು ಹಿಡಿಯಲು ಕಾರಣವಾದರೂ ಏನು..? ಅಭಿನವ ರೇವಣ್ಣ ಸಿದ್ದೇಶ್ವರ ಶ್ರೀ, ಮೃತ್ಯುಂಜಯ ಶ್ರೀ, ಪಂಎಇತ್ ಪಟ್ಟಣ್ ಶ್ರೀ, ಮಲ್ಲಪ್ಪ ಬಾವಿಕಟ್ಟೆ ಹಾಗೂ ಚಂದ್ರಶೇಖರ ಶಿವಪೂಜಿ ಶ್ರೀಗಳು ಈ ರೀತಿ ಒತ್ತಾಯ ಮಾಡುತ್ತಿದ್ದಾರೆ.

ಸ್ವಾಮೀಜಿಗಳೆಲ್ಲಾ ಈ ಬಾರಿಯ ವಿಧಾನಸಭಾ ಚುನಾವಣೆಗೆ ಡಾ ಮಲ್ಲೇಶಪ್ಪ ಎಸ್ ದಡ್ಡೇನವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಟಿ ನಡೆಸಿ, ತೇರದಾಳದಲ್ಲಿ 60 ಸಾವಿರ ಹಟಗಾರ ಲಿಂಗಾಯತರಿದ್ದಾರೆ. ಬಹಳ ವರ್ಷದಿಂದಾನೂ ಕಾಂಗ್ರೆಸ್ ಜೊತೆಗೆ ಇದೆ. ಉಮಾಶ್ರೀ ಅವರಿಗೆ ಟಿಕೆಟ್ ನೀಡಿದರೆ ನಮಗೆ ಅಭ್ಯಂತರವೇನು ಇಲ್ಲ. ಆದರೆ ಅವರು ಗೆದ್ದು ಈಗಾಗಲೇ ಸಚಿವೆಯಾಗಿದ್ದಾರೆ. ಯುವಕರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!