Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತೀಯರ ಹೆಗಲಿಗೆ ಕನಸು ಕೊಡುವುದು : ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್

Facebook
Twitter
Telegram
WhatsApp

ಟಿ20 ವಿಶ್ವಕಪ್ ಮುಗಿದಿದೆ. ನಮ್ಮ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಟ್ರೋಫಿ ಈಗಾಗಲೇ ಎಲ್ಲೆಡೆ ಓಡಾಡಿದೆ. ವಿಶ್ವಕಪ್ ಗೆದ್ದ ಖುಷಿಯಲ್ಲಿಯೇ ಆಟಗಾರರು, ಕ್ರಿಕೆಟ್ ಪ್ರೇಮಿಗಳು, ದೇಶದ ಜನತೆ ತೇಲಾಡುತ್ತಿದ್ದಾರೆ. ಇದರ ನಡುವೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ವಿದಾಯ ಹೇಳಿದ್ದಾರೆ. ಅವರ ಜಾಗಕ್ಕೆ ಗೌತಮ್ ಗಂಭೀರ್ ಹೆಸರನ್ನು ಘೋಷಣೆ ಮಾಡಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು ಗೌತಮ್ ಗಂಭೀರ್ ಹೆಸರನ್ನು ಘೋಷಿಸಿದ್ದಾರೆ. ಹೊಸ ಜವಾಬ್ದಾರಿ ತೆಗೆದುಕೊಂಡ ಗೌತಮ್ ಗಂಭೀರ್ ಸಹ ಖುಷಿ ಪಟ್ಟಿದ್ದು, ದೇಶದ ಬಗ್ಗೆ ಹೆಮ್ಮೆಯ ಮಾತುಗಳನ್ನ ಆಡಿದ್ದಾರೆ.

ಟೀಂ ಇಂಡಿಯಾ ಕೋಚರ ಆದ ಮೇಲೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ‘ಭಾರತ ಎಂಬುದು ನನ್ನ ಅಸ್ತಿತ್ವ. ದೇಶದ ಸೇವೆ ಮಾಡುವುದಕ್ಕೆ ಅವಕಾಶ ಸಿಕ್ಕಿರುವುದು ನನ್ನ ದೊಡ್ಡ ಭಾಗ್ಯಾ. ಭಾರತದ ಕ್ರಿಕೆಟ್ ತಂಡಕ್ಕೆ ಈ ರೀತಿಯಾಗಿ ಮರಳಿರುವುದು ಸಂತಸ ತಂದಿದೆ. ನನ್ನ ಗುರಿ ಇರುವುದು ಒಂದೇ. ಭಾರತೀಯರು ಹೆಮ್ಮೆ ಪಡುವಂತ ಕೆಲಸ ಮಾಡುವುದು. 1.4 ಬಿಲಿಯನ್ ಭಾರತೀಯರ ಕನಸಿಗೆ ಹೆಗಲು ಕೊಡುವುದು’ ಎಂದು ಬರೆದುಕೊಂಡಿದ್ದಾರೆ.

ಈ ವಿಶ್ವಕಪ್ ಮುಗಿದ ಬಳಿಕ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿತ್ತು. ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿಯನ್ನು ಆಹ್ವಾನಿಸಿತ್ತು. ಸಾಕಷ್ಟು ಜನ ಈ ರೇಸಿನಲ್ಲಿ ಇದ್ದರು. ಆದರೆ ಅಂದು ಕೂಡ ಬಿಸಿಸಿಐ ಕಾರ್ಯದರ್ಶಿ ಜೈಶಾ ಅವರು ಮುಂದಿನ ಕೋಚ್ ಗೌತಮ್ ಗಂಭೀರ್ ಆಗಲಿದ್ದಾರೆ ಎಂದೇ ಸೂಚನೆ ನೀಡಿದ್ದರು. ಇದೀಗ ಗೌತಮ್ ಗಂಭೀರ್ ಅವರನ್ನೇ ಆಯ್ಕೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!