Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡದ ಎಲ್ಲ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸಹಕಾರ ನೀಡುವೆ : ಶಾಸಕ ಕೆ.ಸಿ.ವೀರೇಂದ್ರ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ಜೂ.06) : ಸಾಹಿತ್ಯ ಪರಿಷತ್ತಿನ ಎಲ್ಲ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಹೇಳಿದ್ದಾರೆ.

ಅವರು ಸೋಮವಾರ ಶಾಸಕರನ್ನು ಭೇಟಿ ನೀಡಿದ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿಯವರೊಂದಿಗೆ ಮಾತನಾಡಿದರು.

ಕಸಾಪ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಕಸಾಪ ಚುರುಕಿನಿಂದ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಆರು ತಾಲ್ಲೂಕುಗಳಲ್ಲಿರುವ ಘಟಕಗಳು ಸಕ್ರಿಯವಾಗಿವೆ. ಜಿಲ್ಲಾ ಕೇಂದ್ರ ಚಿತ್ರದುರ್ಗದಲ್ಲಿ ಕನ್ನಡ ಭವನದ ಕೊರತೆಯಿದೆ. ಇದು ಜಿಲ್ಲೆಯ ಸಾಹಿತ್ಯಾಸಕ್ತರ ಮತ್ತು ಪರಿಷತ್ತಿನ ಸದಸ್ಯರ ಬಹುದಿನದ ಬೇಡಿಕೆಯಾಗಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಸಾಹಿತ್ಯ,ಸಂಸ್ಕøತಿ ಚಟುವಟಿಕೆಗಳನ್ನು ಕೈಗೊಳ್ಳಲು ಕನ್ನಡ ಭವನದ ಕೊರತೆಯಿದೆ. ಈಗಾಗಲೇ ಜಿಲ್ಲಾ ಕೇಂದ್ರದಲ್ಲಿ ಪರಿಷತ್ತಿನ ವಿಶಾಲ ನಿವೇಶನವಿದೆ. ಕನ್ನಡ ಭವನ ನಿರ್ಮಾಣದ ಜತೆಗೆ ಸಾಹಿತ್ಯ ಚಟುವಟಿಕೆಗಳಿಗೆ ಸಹಕಾರ ನೀಡಬೇಕು ಎಂದು ವಿನಂತಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಸಿ.ವೀರೇಂದ್ರ, ನಾನು ಮೊದಲಿನಿಂದಲೂ ಕನ್ನಡಪರವಾದ ಮನೋಭಾವ ಹೊಂದಿದ್ದೇನೆ. ಹೀಗಾಗಿ ಕನ್ನಡದ ಎಲ್ಲ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು. ಕನ್ನಡದ ಶಾಲು, ಪೇಟ, ಹಾರ ಹಾಕಿ ಶಾಸಕರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಕಾರ್ಯದರ್ಶಿ ಕೆ.ಪಿ.ಎಂ.ಗಣೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಮಹೇಶ್, ಸಿ.ನಾಗರಾಜ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!