ಕನ್ನಡದ ಎಲ್ಲ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸಹಕಾರ ನೀಡುವೆ : ಶಾಸಕ ಕೆ.ಸಿ.ವೀರೇಂದ್ರ

 

ಸುದ್ದಿಒನ್, ಚಿತ್ರದುರ್ಗ, (ಜೂ.06) : ಸಾಹಿತ್ಯ ಪರಿಷತ್ತಿನ ಎಲ್ಲ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಹೇಳಿದ್ದಾರೆ.

ಅವರು ಸೋಮವಾರ ಶಾಸಕರನ್ನು ಭೇಟಿ ನೀಡಿದ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿಯವರೊಂದಿಗೆ ಮಾತನಾಡಿದರು.

ಕಸಾಪ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಕಸಾಪ ಚುರುಕಿನಿಂದ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಆರು ತಾಲ್ಲೂಕುಗಳಲ್ಲಿರುವ ಘಟಕಗಳು ಸಕ್ರಿಯವಾಗಿವೆ. ಜಿಲ್ಲಾ ಕೇಂದ್ರ ಚಿತ್ರದುರ್ಗದಲ್ಲಿ ಕನ್ನಡ ಭವನದ ಕೊರತೆಯಿದೆ. ಇದು ಜಿಲ್ಲೆಯ ಸಾಹಿತ್ಯಾಸಕ್ತರ ಮತ್ತು ಪರಿಷತ್ತಿನ ಸದಸ್ಯರ ಬಹುದಿನದ ಬೇಡಿಕೆಯಾಗಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಸಾಹಿತ್ಯ,ಸಂಸ್ಕøತಿ ಚಟುವಟಿಕೆಗಳನ್ನು ಕೈಗೊಳ್ಳಲು ಕನ್ನಡ ಭವನದ ಕೊರತೆಯಿದೆ. ಈಗಾಗಲೇ ಜಿಲ್ಲಾ ಕೇಂದ್ರದಲ್ಲಿ ಪರಿಷತ್ತಿನ ವಿಶಾಲ ನಿವೇಶನವಿದೆ. ಕನ್ನಡ ಭವನ ನಿರ್ಮಾಣದ ಜತೆಗೆ ಸಾಹಿತ್ಯ ಚಟುವಟಿಕೆಗಳಿಗೆ ಸಹಕಾರ ನೀಡಬೇಕು ಎಂದು ವಿನಂತಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಸಿ.ವೀರೇಂದ್ರ, ನಾನು ಮೊದಲಿನಿಂದಲೂ ಕನ್ನಡಪರವಾದ ಮನೋಭಾವ ಹೊಂದಿದ್ದೇನೆ. ಹೀಗಾಗಿ ಕನ್ನಡದ ಎಲ್ಲ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು. ಕನ್ನಡದ ಶಾಲು, ಪೇಟ, ಹಾರ ಹಾಕಿ ಶಾಸಕರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಕಾರ್ಯದರ್ಶಿ ಕೆ.ಪಿ.ಎಂ.ಗಣೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಮಹೇಶ್, ಸಿ.ನಾಗರಾಜ ಮತ್ತಿತರರಿದ್ದರು.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

34 minutes ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

2 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

2 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

2 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago