Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಆನೆ ಬಾಗಿಲು ಸಮೀಪ ದುರ್ಗಾದೇವಿ ಪ್ರತಿಷ್ಠಾಪನೆ : ಒಂಬತ್ತು ದಿನ ವಿಶೇಷ ಪೂಜೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.15 : ಆನೆಬಾಗಿಲು ಸಮೀಪವಿರುವ ಆಂಜೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಿಂದೂ ಘರ್ಜನೆ ಸೇನಾ ಸಂಸ್ಥಾನ ವತಿಯಿಂದ ದುರ್ಗಾದೇವಿಯನ್ನು ಭಾನುವಾರ ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಲಾಗುತ್ತದೆ.
ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಬಾಣ ಹಿಡಿದಿರುವ ದುರ್ಗಾದೇವಿಯನ್ನು ಕಂಗೊಳಿಸುವಂತೆ ಬಣ್ಣ ಬಣ್ಣದ ಹೂವು ಹಾರಗಳಿಂದ ಸಿಂಗರಿಸಲಾಗಿದೆ. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಶ್ರದ್ದಾಭಕ್ತಿಯನ್ನು ಸಮರ್ಪಿಸಿದರು.

ಅಕ್ಟೋಬರ್ 15 ರಂದು ಸಂಜೆ ಕಲಾಂಜಲಿ ಮೆಲೋಡಿಸ್‍ನವರಿಂದ ವಾದ್ಯಗೋಷ್ಠಿ.

ಅಕ್ಟೋಬರ್ 16 ರಂದು ಸಪ್ತಗಿರಿ ಭಜನಾ ಮಂಡಳಿಯಿಂದ ದೇವರ ನಾಮಗಳು.

ಅಕ್ಟೋಬರ್ 17 ರಂದು ನೃತ್ಯ ಸ್ಪರ್ಧೆ,

ಅಕ್ಟೋಬರ್ 18 ರಂದು ಚಿತ್ರದುರ್ಗ ಸಿಂಗರ್ಸ್ ಜೋನ್ ಇವರಿಂದ ವಾದ್ಯಗೋಷ್ಠಿ,

ಅಕ್ಟೋಬರ್ 19 ರಂದು ಹರಟೆ ಕಟ್ಟೆ ಚರ್ಚಾ ಕಾರ್ಯಕ್ರಮ.

ಅಕ್ಟೋಬರ್ 20 ರಂದು ಶ್ರೀಕಾಂತ್ ಇವರಿಂದ ಅಷ್ಪಲಕ್ಷ್ಮಿ ಪೂಜೆ,

ಅಕ್ಟೋಬರ್ 21 ರಂದು ಬೆಳಿಗ್ಗೆ ಸರಸ್ವತಿ ಪೂಜೆ ಹಾಗೂ ಅಕ್ಷರಾಭ್ಯಾಸ,

ಅಕ್ಟೋಬರ್  22 ರಂದು ದುರ್ಗಾಷ್ಟಮಿ ಪ್ರಯುಕ್ತ ಮೈಸೂರಿನ ದಯಾನಂದ ಶರ್ಮ ಇವರಿಂದ ಗಣ ಹೋಮ, ನವಗ್ರಹ ಹೋಮ, ಧ್ವನಂತರಿ ಹೋಮ, ಸುದರ್ಶನ ಹೋಮ, ನರಸಿಂಹ ಹೋಮ, ಲಕ್ಷ್ಮಿನಾರಾಯಣ ಹೋಮ, ಲಲಿತ ಹೋಮ, ದುರ್ಗಾ ಹೋಮ, ನವ ದುರ್ಗಾ ಹೋಮ, ಅನ್ನಸಂತರ್ಪಣೆ.

ಅಕ್ಟೋಬರ್ 23 ರಂದು ಆಯುಧ ಪೂಜೆ ಪ್ರಯುಕ್ತ ಗುರುರಾಜ್ ಇವರಿಂದ ಕೊಳಲು ವಾದನ,

ಅಕ್ಟೋಬರ್ 24 ರಂದು ಬನ್ನಿ ಮುಡಿಯುವ ಉತ್ಸವ, ಸಂಜೆ ಭಕ್ತಿಗೀತೆಗಳು,

ಅಕ್ಟೋಬರ್ 25 ರಂದು ನಗರದ ಪ್ರಮುಖ ಬೀದಿಗಳಲ್ಲಿ ದುರ್ಗಾದೇವಿಯ ಶೋಭಾಯಾತ್ರೆ ನಂತರ ಚಂದ್ರವಳ್ಳಿಯಲ್ಲಿ ವಿಸರ್ಜಿಸಲಾಗುವುದು. ಭಕ್ತಾಧಿಗಳು ಒಂಬತ್ತು ದಿನಗಳ ಕಾಲ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದುರ್ಗಾದೇವಿಯ ಕೃಪೆಗೆ ಪಾತ್ರರಾಗುವಂತೆ ಹಿಂದೂ ಘರ್ಜನೆ ಸೇನಾ ಸಂಸ್ಥಾನ ಅಧ್ಯಕ್ಷ ಸಾಗರ್ ವಿನಂತಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!