Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಲ್ಕು ದಿನದಿಂದ ಚಿನ್ನದ ದರ ಇಳಿಕೆ..!

---Advertisement---

ಬೆಂಗಳೂರು: ಚಿನ್ನ ಬೆಳ್ಳಿ ಬೆಲೆಯಲ್ಲಿ ನಿರೀಕ್ಷೆಯಂತೆ ಡಿಸೆಂಬರ್ ತಿಂಗಳಲ್ಲಿ ಇಳಿಕೆಯಾಗುತ್ತಿದೆ‌. ದಿನೇ ದಿನೇ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ನಿನ್ನೆಯೂ ಇಳಿಕೆಯಾಗಿದ್ದ ಚಿನ್ನ ಇಂದು ಕೂಡ ಇಳಿಕೆಯಾಗಿದೆ. ಸುಮಾರು 40 ರೂಪಾಯಿ ಅಷ್ಟು ಇಳಿಕೆಯಾಗಿದೆ. ಒಂದು ಗ್ರಾಂಗೆ 40 ರೂಪಾಯಿ ಇಳಿಕೆಯಾಗಿರುವುದು ಆಭರಣ ಪ್ರಿಯರಿಗೆ ಕೊಂಚ ಖುಷಿ ತರಿಸಿದೆ. ಸತತ ಒಂದು ವಾರದಿಂದ ಇಳಿಕೆಯತ್ತ ಚಿನ್ನದ ದರ ಸಾಗುತ್ತಿರುವುದು ಖುಷಿ ಕೊಟ್ಟಿದೆ. ಈ ಮೂಲಕ 22 ಕ್ಯಾರಟ್ ಚಿನ್ನ ಈಗ ಹತ್ತು ಗ್ರಾಂಗೆ 70,400 ರೂಪಾತಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 76,800 ರುಇಪಾಯಿ ಆಗಿದೆ.

ಸದ್ಯ ಭಾರತ ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ.

ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತಾ, ಕೇರಳ, ಭುವನೇಶ್ವರದಲ್ಲಿ ಹತ್ತು ಗ್ರಾಂನ 22 ಕ್ಯಾರಟ್ ಚಿನ್ನದ ದರ 70,400 ರೂಪಾಯಿ ಇದೆ. ಉಳಿದಂತೆ ದೆಹಲಿಯಲ್ಲಿ 70,550 ಇದ್ರೆ, ಅಹ್ಮದಾಬಾದ್ ನಲ್ಲಿ 70,450 ರೂಪಾಯಿ ಇದೆ. ಜೈಪುರ್, ಲಕ್ನೋ ನಗರದಲ್ಲಿ 70,550 ರೂಪಾಯಿ ಇದೆ. ವಿದೇಶದಲ್ಲಿನ ದರವನ್ನು ನೋಡುವುದಾದರೆ ಮಲೇಷ್ಯಾದಲ್ಲಿ 68,460 ಇದೆ. ದುಬೈನಲ್ಲಿ 67,420 ಆಗಿದೆ. ಇನ್ನು ಅಮೆರಿಕಾದಲ್ಲಿ 66,380 ರೂಪಾಯಿ ಇದೆ. ಸಿಂಗಾಪುರದಲ್ಲಿ 67,910 ರೂಪಾಯಿ ಇದೆ. ಸೌದಿ ಅರೇಬಿಯಾದಲ್ಲಿ 67,420 ರೂಪಾಯಿ ಇದೆ. ಈ ಮೂಲಕ ವಿದೇಶದಲ್ಲೂ ಒಂದೊಂದು ರೀತಿಯ ಬೆಲೆ ಇದೆ.

ಹಾಗೇ ಬೆಳ್ಳಿ ಬೆಲೆಯಲ್ಲೂ ವ್ಯತ್ಯಾಸವಾಗಿದ್ದು, ನೂರು ಗ್ರಾಂ ಬೆಳ್ಳಿ‌ ಬೆಲೆ, ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್ ನಗರದಲ್ಲಿ 9,050 ರೂಪಾಯಿ ಇದೆ. ಚೆನ್ನೈ, ಭುವನೇಶ್ವರದಲ್ಲಿ 9,800 ರೂಪಾಯಿ‌ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment