Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ | ಚಿನ್ನ ಖರೀದಿಸುವ ಸೋಗಿನಲ್ಲಿ ಬಂದ ಕಳ್ಳರು ಮಾಡಿದ್ದೇನು ?

Facebook
Twitter
Telegram
WhatsApp

ಸುದ್ದಿಒನ್,  ಚಿತ್ರದುರ್ಗ: ಚಿನ್ನ ಖರೀದಿಸುವ ನೆಪದಲ್ಲಿ ಬಂದು, ಗ್ರಾಹಕರ ಹಳೇ ಚಿನ್ನದ ಬ್ಯಾಗ್ ಅನ್ನೇ ಕದ್ದೊಯ್ದಿರುವ ಪ್ರಕರಣ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಹೊಳಲ್ಕೆರೆ ಪಟ್ಟಣದಲ್ಲಿರುವ ಸಂಧ್ಯಾದೀಪ ಜ್ಯುವೆಲ್ಲರಿ ಶಾಪ್ ನಲ್ಲಿ ಈ ಘಟನೆ ಅಕ್ಟೋಬರ್ 15 ರಂದು ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. 

ಸುಮಿತ್ರಾ ಎಂಬುವವರು ತಮ್ಮ ಬಳಿಯಿದ್ದ ಹಳೆ ಚಿನ್ನ ಕೊಟ್ಟು, ಹೊಸ ಚಿನ್ನ ಖರೀದಿಸುವುದಕ್ಕಾಗಿ ಶಾಪ್ ಗೆ ಬಂದಿದ್ದರು. ಹಳೆಯ ಚಿನ್ನವಿದ್ದ ಬ್ಯಾಗ್ ಅನ್ನು ಇಟ್ಟು, ಒಡವೆ ನೋಡುವುದರಲ್ಲಿ ಮಗ್ನರಾಗಿದ್ದರು.

ಸುಮಿತ್ರಾ ಒಡವೆ ತೆಗೆದುಕೊಳ್ಳಲು ಬಂದ ಸಮಯದಲ್ಲಿಯೇ ಒಬ್ಬ ಮಹಿಳೆ, ಬಾಲಕನೊಂದಿಗೆ ಜ್ಯುವೆಲ್ಲರಿ ಶಾಪ್ ಗೆ ಬಂದಿದ್ದಾಳೆ. ಚಿನ್ನವನ್ನು ತೆಗೆದುಕೊಳ್ಳುವ ಡ್ರಾಮಾ ಮಾಡಿದ್ದಾಳೆ. ಆ ಕಡೆ ಚಿನ್ನ ನೋಡಿವಂತೆ ನಾಟಕವಾಡುತ್ತಿದ್ದರೆ, ಈ ಕಡೆ ಬಾಲಕ ತನ್ನ ಕೈಚಳಕ ತೋರಿಸಿದ್ದಾನೆ. ತಾನು ತಂದಿದ್ದ ಬ್ಯಾಗ್ ಒಂದನ್ನು, ಹಳೆ ಚಿನ್ನವಿದ್ದ ಬ್ಯಾಗ್ ಮೇಲೆ ಹಾಕಿದ್ದಾನೆ. ಸ್ವಲ್ಪ ಸ್ವಲ್ಪವೇ ಬ್ಯಾಗ್ ಅನ್ನು ಕೆಳಗಡೆಗೆ ಜರುಗಿಸುತ್ತಾ ಬಂದಿದ್ದಾನೆ.

ಯಾರು ಗಮನ ಕೊಡಯತ್ತಿಲ್ಲ ಎಂಬುದನ್ನು ಗಮನಿಸಿದ ಬಾಲಕ, ಹಳೆ ಚಿನ್ನವಿದ್ದ ಬ್ಯಾಗ್ ಅನ್ನು ತೆಗೆದುಕೊಂಡು ಹೊರಗೆ ಹೊರಟೆ ಬಿಟ್ಟಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ. ಸುಮಿತ್ರಾ ಎಂಬ ಮಹಿಳೆ ತಂದಿದ್ದ ಬ್ಯಾಗ್ ನಲ್ಲಿ ಸುಮಾರು 1 ಲಕ್ಷದ 25 ಸಾವಿರ ಬೆಲೆ ಬಾಳುವ ಚಿನ್ನಾಭರಣವಿತ್ತು. ಈಗ ಅದು ಕಳ್ಳರ ಪಾಲಾಗಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!