ಉನ್ನತ ಶಿಕ್ಷಣ ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಸುವರ್ಣಾವಕಾಶ ಕಲ್ಪಿಸಿದೆ. ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2026–27ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ ಹಾಗೂ ಇತರೆ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಶೇಷವಾಗಿ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಅಲ್ಪಸಂಖ್ಯಾತ ಸಮುದಾಯಗಳ (ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ ಷರತ್ತುಬದ್ಧ ಉಚಿತ ಪ್ರವೇಶಾತಿ ಸೌಲಭ್ಯ ಕಲ್ಪಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.”ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಯುಜಿಸಿ ಮಾನ್ಯತೆ ಪಡೆದ ಶಿಕ್ಷಣವನ್ನು ದೂರಶಿಕ್ಷಣದ ಮೂಲಕ ಹಲವು ವರ್ಷಗಳಿಂದ ನೀಡುತ್ತಿದ್ದು, ರಾಜ್ಯದ ಏಕೈಕ ಮುಕ್ತ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಲಭ್ಯವಿರುವ ಕೋರ್ಸ್ಗಳು
ವಿದ್ಯಾರ್ಥಿಗಳು ಈ ಕೆಳಗಿನ ಕೋರ್ಸ್ಗಳಿಗೆ ಪ್ರವೇಶ ಪಡೆಯಬಹುದು:
ಸ್ನಾತಕ ಪದವಿ: ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿಬಿಎ., ಬಿಸಿಎ., ಬಿಎಸ್ಡಬ್ಲ್ಯು., ಬಿ.ಲಿಬ್.ಐಎಸ್ಸಿ.
ಸ್ನಾತಕೋತ್ತರ ಪದವಿ: ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಎಸ್ಸಿ., ಎಂ.ಸಿಎ., ಎಂ.ಎಸ್ಡಬ್ಲ್ಯು., ಎಂ.ಲಿಬ್.ಐಎಸ್ಸಿ., ಎಂ.ಎ. (ಪತ್ರಿಕೋದ್ಯಮ)
ಪಿಜಿ ಡಿಪ್ಲೊಮಾ ಮತ್ತು ಪ್ರಮಾಣಪತ್ರ ಕೋರ್ಸ್ಗಳು
ಈ ಶೈಕ್ಷಣಿಕ ವರ್ಷದಿಂದ ಜ್ಯೋತಿರ್ವಿಜ್ಞಾನ (ಫಲ ಜ್ಯೋತಿಷ್ಯ, ಮೇಧಿನಿ ಜ್ಯೋತಿಷ್ಯ, ವಾಸ್ತು ಜ್ಯೋತಿಷ್ಯ) ಹಾಗೂ ಲಿಂಗ್ವಿಸ್ಟಿಕ್ಸ್ ಹೊಸ ಕೋರ್ಸ್ಗಳನ್ನೂ ಆರಂಭಿಸಲಾಗಿದೆ. ಈ ಕೋರ್ಸ್ಗಳಿಗೆ ಸೆಪ್ಟೆಂಬರ್ 15ರವರೆಗೆ ಪ್ರವೇಶಾತಿ ಅವಕಾಶವಿದೆ.
ಉಚಿತ ಪ್ರವೇಶಾತಿಗೆ ಅರ್ಹತೆ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ.
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹8 ಲಕ್ಷ ಮೀರಿರಬಾರದು.
ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ.
ಪ್ರವೇಶ ಪಡೆಯುವ ಸಮಯದಲ್ಲಿ ಬೇರೆ ಯಾವುದೇ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಲ್ಲಿ ಪೂರ್ಣಕಾಲಿಕ, ಅರೆಕಾಲಿಕ ಅಥವಾ ದೂರಶಿಕ್ಷಣ ಕೋರ್ಸ್ನಲ್ಲಿ ದಾಖಲಾತಿ ಹೊಂದಿರಬಾರದು.
ಅಗತ್ಯ ದಾಖಲೆಗಳು
ಅರ್ಜಿಯೊಂದಿಗೆ ಈ ದಾಖಲೆಗಳನ್ನು ಸಲ್ಲಿಸಬೇಕು:
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಂಕಪಟ್ಟಿ
ಪದವಿ ಅಂಕಪಟ್ಟಿಗಳು (ಅನ್ವಯಿಸಿದಲ್ಲಿ)
ಆಧಾರ್ ಕಾರ್ಡ್
ಬ್ಯಾಂಕ್ ಖಾತೆ ವಿವರಗಳು
ನಾಲ್ಕು ಪಾಸ್ಪೋರ್ಟ್ ಗಾತ್ರದ ಭಾವಚಿತ್ರಗಳು
ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ
ಮಹಿಳೆಯರಿಗೆ ಬಿಪಿಎಲ್ ಕಾರ್ಡ್ (ಅನ್ವಯಿಸಿದಲ್ಲಿ)
ಉಚಿತ ಪ್ರವೇಶಾತಿಗೆ ಆದಾಯ ಹಾಗೂ ಜಾತಿ ಪ್ರಮಾಣಪತ್ರ
ಹೆಚ್ಚಿನ ಮಾಹಿತಿಗಾಗಿ ಮಡಿಕೇರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದು. ಅಲ್ಲದೆ 8296215714, 9483570900, 9844395986 ಸಂಖ್ಯೆಗಳ ಮೂಲಕವೂ ಮಾಹಿತಿ ಪಡೆಯಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











