Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿರುದ್ಯೋಗಿಗಳಿಗೆ ಸುವರ್ಣಾವಕಾಶ : ಬಾಳೆದಿಂಡಿನಿಂದ ನಾರು ಸಂಸ್ಕರಣೆ ತಾಂತ್ರಿಕ ತರಬೇತಿ ; ಅರ್ಜಿ ಸಲ್ಲಿಸಲು ಜನವರಿ 6 ಕೊನೆದಿನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.03 : ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ 5 ದಿನಗಳ ಉಚಿತ ತರಬೇತಿ ಕಾರ್ಯಾಗಾರಕ್ಕೆ ಐಐಎಸ್ಸಿ ಯಿಂದ ಅರ್ಜಿ ಅಹ್ವಾನಿಸಲಾಗಿದೆ.

ಐಐಎಸ್ಸಿಯ ಅಂಗ ಸಂಸ್ಥೆಯಾದ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್‍ಮೆಂಟ್ ಮತ್ತು ಧಾರವಾಡದ ಕೃಷಿವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಈ ತರಬೇತಿಯನ್ನು ಜನವರಿ ತಿಂಗಳ 8 ರಿಂದ 12 ರವರೆಗೆ ಧಾರವಾಡ ವಿವಿಯಲ್ಲಿ ಏರ್ಪಡಿಸಲಾಗಿದೆ.

ತರಬೇತಿ ಕಾರ್ಯಾಗಾರದಲ್ಲಿ ಬಾಳೆದಿಂಡಿನಿಂದ ನಾರು ಉತ್ಪಾದನೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ತಾಂತ್ರಿಕ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು. ಈ ತರಬೇತಿ ಕಾರ್ಯಾಗಾರಕ್ಕೆ ಚಿತ್ರದುರ್ಗ ಜಿಲ್ಲೆಯ ಬಾಳೆ ಬೆಳೆಗಾರರು,ಕುಶಲಕರ್ಮಿಗಳು, ನಿರುದ್ಯೋಗಿಗಳು, ನವೋದ್ಯಮಿಗಳು ಹಾಗೂ ಉದ್ಯಮ ಆರಂಭಿಸುವ ಇಚ್ಚೆಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿನ ಊಟ,ವಸತಿ ಸೇರಿದಂತೆ ಸಂಪೂರ್ಣ ಉಚಿತವಾಗಿದೆ. ಸ್ಥಳೀಯ ಜನರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 6 ಅಂತಿಮ ದಿನವಾಗಿದೆ.

ಆಸಕ್ತರು ಗಣೇಶ್ ತೋಳಾರ್ (7349695100), ಕೋಟೇಶ್ ಕೊರವರ(9663364234) ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆದು ನೊಂದಾಯಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...