ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 20 :
KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಗೋನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಗುರುವಾರ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ‘ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ ಈರಣ್ಣ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಪಿಳ್ಳೇಕೇರಿನಹಳ್ಳಿಯ ಶಾಲೆಯನ್ನು ಕೆಪಿಎಸ್ -ಮ್ಯಾಗ್ನೆಟ್ ಶಾಲೆಯನ್ನಗಿಸಿ ಗೋನೂರು ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. ಗೋನೂರು ಗ್ರಾಮದಲ್ಲಿ 120ಕ್ಕೂ ಹೆಚ್ಚು ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರವುದು ಸರ್ಕಾರವು ಬಡವರು, ಗಾರೆ ಕೆಲಸ ಮಾಡುವ ಮಕ್ಕಳಿಗೆ ಮಾಡುವ ದ್ರೋಹ. ಹಾಗೆ ಈ ಶಾಲೆಯ ಮಕ್ಕಳಿಗೆ ಶಿಕ್ಷಕರು ಸಂಖ್ಯೆ ಕಡಿಮೆ ಇದೆ, ಈ ಊರಿಗೆ ಪ್ರೌಢಶಾಲೆ ಅಗತ್ಯ ಇದ್ದು, ಈ ಕೆಲಸವನ್ನು ಕೂಡಲೇ ಮಾಡಲಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ ನಮ್ಮ ಗ್ರಾಮ ಮಾತ್ರವಲ್ಲದೆ ಸುತ್ತಲಿನ ಹಲವು ಗ್ರಾಮಗಳ ಶಾಲೆಗಳನ್ನು ವಿಲೀನ ಮಾಡಲು ನಿರ್ಧರಿಸಲಾಗಿದೆ. ಹಾಗಾಗಿ ನಾವು ಒಂದಾಗಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ’ ಎಂದು ತಿಳಿಸಿದರು.
ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮುಖಂಡರು ರವಿಕುಮಾರ್ ಅವರು ಬೆಂಬಲಿಸಿ ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚಲು ನಾವು ಬಿಡಬಾರದು. ‘ಸರ್ಕಾರಿ ಶಾಲೆಗಳು ನಮ್ಮ ಹಕ್ಕು, ಎಂದು ಈ ವಿಚಾರದ ಬಗ್ಗೆ ಬಹಳ ಅರ್ಥಮಾಡಿಕೊಂಡು ಶಾಲೆ ಉಳಿಸಲು ಒಗ್ಗಟ್ಟಾಗಿ ಮುಂದೆ ಬರಬೇಕೆಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಸರ್ಕಾರಿ ಶಾಲೆ ಉಳಿಸುವ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಅಧ್ಯಕ್ಷರು ತಿಪ್ಪೇಸ್ವಾಮಿ, ಉಪಾಧ್ಯಕ್ಷರು ಸಿದ್ದೇಶ್, ಶಿವಪ್ಪ ಕಾರ್ಯದರ್ಶಿ ಬಂಗಾರಪ್ಪ, ಜಂಟಿ ಕಾರ್ಯದರ್ಶಿ ಪಟೇಲ್ ತಿಪ್ಪೇಸ್ವಾಮಿ, ಆರ್.ಮಂಜುನಾಥ ಮತ್ತು ಇನ್ನಿತರೆ ಊರಿನ ವಿದ್ಯಾರ್ಥಿಗಳು, ಗ್ರಾಮಸ್ಥರು, ಯುವಕರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













