ಈ ವರ್ಷವೂ ಉತ್ತಮ ಫಸಲು : ಮೈಲಾರ ಕಾರ್ಣಿಕದಲ್ಲಿ ನುಡಿದ ಭವಿಷ್ಯವೇನು..?

suddionenews
1 Min Read

ವಿಜಯಪುರ: ಮೈಲಾರ ಕಾರ್ಣಿಕಕ್ಕೆ ಸಾಕಷ್ಟು ಜನ ಕಾಯುತ್ತಿರುತ್ತಾರೆ. ಈ ದೈವವಾಣಿಯಿಂದ ರಾಜ್ಯದ ಮುಂದಿನ ಭವಿಷ್ಯ ಏನಾಗಲಿದೆ ಎಂದು ಅಂದಾಜಿಸುತ್ತಾರೆ. ನಿನ್ನೆಯಿಂದಾನೇ ಕಾಯುತ್ತಿದ್ದ ಭಕ್ತರಿಗೆ ಇಂದು ಮೈಲಾರ ಕಾರ್ಣಿಕ ಭವಿಷ್ಯ ಕೇಳಿಸಿದೆ. ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯ ದೊಡ್ಡ ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಭವಿಷ್ಯ ನುಡಿದಿದ್ದಾರೆ. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಬಳಿಕ ಗೊರವಪ್ಪ ಸಂಜೆ ಬಿಲ್ಲನ್ನೇರಿ ಸದ್ದಲ್ಲೇ ಎನ್ನುತ್ತಿದ್ದಂತೆ ನೆರದವರೆಲ್ಲ ಶಾಂತರಾಗುತ್ತಿದ್ದಂತೆಯೇ ಕೋಟೆಪ್ಪ ಭವಿಷ್ಯ ನುಡಿದಿದ್ದಾರೆ.

ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ ಎಂದು ದೈವವಾಣಿ ನುಡಿದಿದೆ. ಇದರ ಅರ್ಥ ಪ್ರಸಕ್ತ ವರ್ಷದಲ್ಲಿ ಮಳೆ ಸಮೃದ್ಧವಾಗಿ ಉತ್ತಮ ಫಸಲು ಬರುತ್ತದೆ. ಆದರೆ ಇಳುವರಿ ಕುಂಠಿತ ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಭಕ್ತರು ಕಾರ್ಣಿಕದ ಅರ್ಥವನ್ನು ಮಾತಾಡಿಕೊಂಡಿದ್ದಾರೆ. ಇನ್ನು ಕೆಲವರು ಮುಂಬರುವ ದಿನಗಳಲ್ಲಿ ಗಂಭೀರ ಘಟನೆ ನಡೆಯಲಿದೆ. ರಾಜ್ಯ ರಾಷ್ಟ್ರದಲ್ಲಿ ದೊಡ್ಡ ಘಟನೆ ನಡೆಯಲಿದೆ ಎಂದು ದೈವವಾಣಿಯನ್ನು ನಾನಾ ರೀತಿಯಲ್ಲಿ ಅರ್ಥೈಸಿದ್ದಾರೆ.

ಇನ್ನು ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಕಾರ್ಣಿಕ ನುಡಿಯಲಾಗಿದೆ. ನೀರಿ‌ ಕೊಡ ಉರಡತಲೇ, ತುಪ್ಪದ ಕೊಂಡ ಉಕ್ಕತಲೇ ಪರಾಕ್ ಎಂದು 12 ಅಡಿ ಎತ್ತರದ ಬಿಲ್ಲೇರು ಗೊರವಯ್ಯ ಹನುಮನಗೌಡ ಗುರೇಗೌಡರ ದೈವವಾಣಿ ನುಡಿದಿದ್ದಾರೆ. ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಸಮೃದ್ಧವಾಗಿ ಬೆಳೆಗಳು ಬರಲಿವೆ ಎಂದು ಅಲ್ಲಿ ಕೂಡ ಗ್ರಾಮಸ್ಥರು ವಿಶ್ಲೇಷಣೆ ಮಾಡಲಾಗಿದೆ. ಎರಡು ಕಡೆಯ ಕಾರ್ಣಿಕ ಈ ಬಾರಿ ಉತ್ತಮ ಬೆಳೆಯಾಗಲಿದೆ ಎಂದೇ ಇದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks