ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸಿದರು. ಇಂದು ಎಲ್ಲರಿಗೂ ಶುಭದಿನ. ಈ ಶುಭ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ವಿಶೇಷವಾದದ್ದೇನೋ ಮಾಡುವುದಕ್ಕೆ ಹೊರಟಿದ್ದಾರೆ. ಅದರಲ್ಲೂ ಈ ಐಡಿಯಾ ದೇಶದಲ್ಲಿಯೇ ಇದೆ ಮೊದಲು. ಹಾಗಾದ್ರೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮಾಡುವುದಕ್ಕೆ ಹೊರಟಿರೋದು ಏನು..? ಎಂಬ ಮಾಹಿತಿ ಇಲ್ಲಿದೆ.

ತಾವೇನು ಮಾಡುವುದಕ್ಕೆ ಹೊರಟಿದ್ದೇವೆ ಎಂಬುದನ್ನು ತಿಳಿಸಿರುವ ಅಶ್ವಿನಿ ಪುನೀತ್ ರಾಜ್‍ಕುಮಾರ್, ನೀವೆಲ್ಲರೂ ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಪ್ರೀತಿ, ಗೌರವವೇ ಅಪ್ಪು ನಮ್ಮ ಜೊತೆಗೆ ಇನ್ನೂ ಇದ್ದಾರೆ ಎಂಬುದಕ್ಕೆ ಸಾಕ್ಷಿ. ನಿಮ್ಮೆಲ್ಲರ ನಗುವಿನಲ್ಲಿಯೇ ನಾನು ಅಪ್ಪು ಅವರನ್ನು ಕಾಣುತ್ತಿದ್ದೇನೆ. ಪ್ರತಿದಿನವೂ ಅಪ್ಪು ಅವರನ್ನು ಸೆಲೆಬ್ರೇಟ್ ಮಾಡುವ ಆಸೆ. ಪ್ರತಿಕ್ಷಣ ಅಪ್ಪು ಅವರನ್ನು ನೋಡುವ ಆಸೆ. ಮರೆಯಾದರೂ ಮರೆಯಲು ಸಾಧ್ಯವಿಲ್ಲ. ನಿಮ್ಮ ನಗುವಿನ ಒಡೆಯನನ್ನು ಪ್ರತಿದಿನ ನೋಡಲು ನಿಮಗಾಗಿ ಕಾದಿದೆ ಒಂದು ಗುಡ್ ನ್ಯೂಸ್. ಅಪ್ಪು ಹೆಸರಲ್ಲಿ ಒಂದು ದಿಟ್ಟ ಹೆಜ್ಜೆ. ಅದುವೆ PRKstarfandom App. ಅತಿ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ ಎಂದಿದ್ದಾರೆ.

ಅಷ್ಟಕ್ಕೂ ಈ PRKstarfandom App ಎಂದರೆ ಏನು, ಅದು ಹೇಗೆ ವರ್ಕ್ ಆಗುತ್ತೆ ಗೊತ್ತಾ..? ಈ ಆಪ್ ನಲ್ಲಿ ಅಪ್ಪು ಅವರಿಗೆ ಸಂಬಂಧಿಸಿದ ಎಲ್ಲಾ ವಿವರಗಳು ಲಭ್ಯವಿರಲಿವೆ. ಅಪ್ಪು ಅವರ ಸಿನಿಮಾ, ಸಾಂಗ್ಸ್, ಡ್ಯಾನ್ಸ್, ಭಾಷಣ, ಅವರ ಬಗೆಗಿನ ಸ್ಪೆಷಲ್ ಮಾಹಿತಿ ಇದರಲ್ಲಿ ಸಿಗಲಿದೆ. ಅಪ್ಪು ಬಗ್ಗೆ ಈ ಆಪ್ ಮೂಲಕ ಅವರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬಹುದಾಗಿದೆ.

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

8 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

8 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

9 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

9 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

10 hours ago