Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಗುಡ್ ನ್ಯೂಸ್ ; ಮುಂಗಾರು ಯಾವಾಗಿಂದ ಆರಂಭ..? ಮಳೆಯ ಅಪ್ಡೇಟ್ ಇಲ್ಲಿದೆ

---Advertisement---

 

ಬೆಂಗಳೂರು; ಮಳೆಗಾಲ ಶುರುವಾಯ್ತು ಅಂದ್ರೆ ರೈತರಿಗೆ ಇನ್ನಿಲ್ಲದ ಖುಷಿ ಸಿಗುತ್ತೆ. ಅದರಲ್ಲೂ ಮುಂಗಾರು ಮಳೆ ಆರಂಭವಾಗುವುದನ್ನೇ ಕಾಯುತ್ತಾ ಇರುತ್ತಾರೆ. ಇದೀಗ ಈ ವರ್ಷದ ಮುಂಗಾರು ಮಳೆಯ ಆರಂಭದ ಬಗ್ಗೆ ಹವಮಾನ ಇಲಾಖೆ ಸೂಚನೆ ನೀಡಿದೆ. ಮತ್ತೊಂದು ಖುಷಿಯ ವಿಚಾರ ಅಂದ್ರೆ ಹಿಂದಿನ ವರ್ಷಕ್ಕಿಂತ ಈ ವರ್ಷ ಇನ್ನಷ್ಟು ಜಾಸ್ತಿ ಇರಲಿದೆ.

ಮುಂಗಾರು ಮಳೆ ಶೀಘ್ರವೇ ಆರಂಭವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ನೈರುತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1ರ ಬಳಿಕ ಕೇರಳಕ್ಕೆ ಆಗಮಿಸುತ್ತಿತ್ತು. ಈ ಬಾರಿ ನಾಲ್ಕು ದಿನ ಮುಂಚಿತವಾಗಿಯೇ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ. ಅಂದ್ರೆ ಮೇ 27ರಿಂದಾನೇ ಮುಂಗಾರು ಮಳೆ ಆರಂಭವಾಗಲಿದೆ. ಅಂದ್ರೆ 16 ವರ್ಷಗಳ ಬಳಿಕ ಮುಂಗಾರು ಮಳೆ ಇಷ್ಟು ಬೇಗ ಆರಂಭವಾಗ್ತಾ ಇರೋದು.

ಇನ್ನು ಕರ್ನಾಟಕಕ್ಕೆ ಈ ಬಾರಿ ಮೇ 30 ಅಥವಾ 31ಕ್ಕೆ ಆಗಮಿಸುವ ನಿರೀಕ್ಷೆ ಇದೆ. ಅಂದರೆ ರಾಜ್ಯಕ್ಕೆ ಸಾಮಾನ್ಯ ದಿನಗಳಿಗಿಂತ 5 ರಿಂದ 6 ದಿನ ಮುಂಚಿತವಾಗಿ ಆಗಮನವಾಗುವ ಸಾಧ್ಯತೆ ಇದೆ. ಕಳೆದ ವರ್ಷ ಅಂದ್ರೆ 2024ರಲ್ಲಿ ಕರ್ನಾಟಕದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಅದ್ಭುತವಾಗಿ ಸುರಿದಿತ್ತು. ಈ ವರ್ಷವೂ ಉತ್ತಮ ಮಳೆಯಾಗಲಿದೆ. ಇನ್ನು ಈ ವರ್ಷ ಬೇಸಿಗೆಯಲ್ಲಿಯೇ ಒಂದಷ್ಟು ಮಳೆ ಶುರುವಾಗಿತ್ತು. ಇನ್ಮೇಲೆ ಮುಂಗಾರು ಮಳೆಯೇ ಆರಂಭವಾಗಲಿದೆ. ಮೇ 12ರವರೆಗೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ನಗರ, ಕೋಲಾರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment