Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : 50ಕ್ಕೆ ಇಳಿಯುವ ಸಾಧ್ಯತೆಯ ಸೂಚನೆ..!

Facebook
Twitter
Telegram
WhatsApp

ಚಿನ್ನ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟ ಇರುವುದಿಲ್ಲ ಹೇಳಿ. ಆದರೆ ದಿನೇ ದಿನೇ ಚಿನ್ನದ ಮೇಲೆ ಬೆಲೆ ಏರಿಕೆ ಆಗುತ್ತಲೇ ಇದೆ. ಚಿನ್ನ ತೆಗೆದುಕೊಳ್ಳುವುದು ಕನಸಿನ ಮಾತಾಗಿ ಉಳಿದಿದೆ. ಆದರೂ ಚಿನ್ನಕೊಳ್ಳುವವರ ಸಂಖ್ಯೆ ಏನು ಕಡಿಮೆಯಾಗಿಲ್ಲ. ಸದ್ಯಕ್ಕೆ ಹತ್ತು ಗ್ರಾಂ ಚಿನ್ನದ ಬೆಲೆ 66,650 ರೂಪಾಯಿ ಇದೆ. ಇಂದು ಒಂದು ಲಕ್ಷಕ್ಕೆ ಬಂದರೂ ಆಶ್ಚರ್ಯವೇನಿಲ್ಲ. ಆದರೆ ಈಗ ಖುಷಿಯ ವಿಚಾರವೊಂದು ಹರಿದಾಡುತ್ತಿದೆ. ಅದು ಸತ್ಯವಾಗಿ ಬಿಟ್ಟರೆ ಮಹಿಳಾ ಮಣಿಗಳಿಗೆ ಸಂತಸವೋ ಸಂತಸ.

ಚಿನ್ನದ ಬೆಲೆಯಲ್ಲಿ ಬಾರೀ ಕುಸಿತ ಕಾಣುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಿದ್ದಾರೆ. ಚಿನ್ನದ ಬೆಲೆಯಲ್ಲಿ ಹತ್ತು ಗ್ರಾಂಗೆ ಐವತ್ತು ಸಾವಿರಕ್ಕೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಂದು ತಿಂಗಳಿನಿಂದ ಬಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ ಇಳಿಕೆ ಕಂಡರೆ ಖುಷಿಯ ವಿಚಾರವೇ ಅಲ್ವೆ.

ಈ ಹಿಂದೆ ಭೂಮಿಯೊಳಗೆ ಚಿನ್ನ ಸಿಗುತ್ತಿತ್ತು. ಹೀಗಾಗಿ ಚಿನ್ನದ ಬೆಲೆ ಎಲ್ಲರ ಕೈಗೆ ಎಟಕುವಂತೆ ಇತ್ತು. ಆದರೆ ಈಗ ಅದು ಕೂಡ ನಿಂತು ಹೋಗಿದೆ. ಹೀಗಾಗಿ ದಿನೇ ದಿನೇ ಏರಿಕೆಯತ್ತಲೇ ಸಾಗುತ್ತಿದೆ. ಇನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಈಗ ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ನಿಂತಿದೆ. ಪ್ಯಾಲೆಸ್ತೀನ್ ಭಾಗದಲ್ಲಿ ಶಾಂತಿಯ ವಾತಾವರಣ ಮೂಡಿದೆ. ಹೀಗಾಗಿ ಚಿನ್ನದ ಬೆಲೆಯಲ್ಲೂ ಕುಸಿತ ಕಾಣಬಹುದು ಎಂಬ ನಿರೀಕ್ಷೆ ಇದ್ದು, 50 ಸಾವಿರಕ್ಕೆ ಇಳಿಯಬಹುದು ಎಂದು ಹೇಳಲಾಗುತ್ತಿದೆ. ಇದು ಹೂಡಿಕೆದಾರರಿಗೆ ಕಹಿ ಸುದ್ದಿಯಾದರೆ ಕೊಳ್ಳುವ ಗ್ರಾಹಕರಿಗೆ ಡಬಲ್ ಧಮಾಕದ ಸುದ್ದಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಂಡಮಾರುತಕ್ಕೆ ಸಿಲುಕಿದ್ದ ಟೀಂ ಇಂಡಿಯಾ ಕಡೆಗೂ ತವರಿಗೆ ಪ್ರಯಾಣ : ನಾಳೆ ಮುಂಬೈನಲ್ಲಿ ಟ್ರೋಫಿಯೊಂದಿಗೆ ರೋಡ್ ಶೋ

ನವದೆಹಲಿ: ಹಲವು ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಬೀಗಿದೆ. ಈ ಸಂತಸವನ್ನು ಇಡೀ ದೇಶವೇ ಸಂಭ್ರಮಿಸಿದೆ, ಟೀಂ ಇಂಡಿಯಾ ಆಟಗಾರರನ್ನು ಕೊಂಡಾಡಿದ್ದಾರೆ. ಗೆದ್ದ ಮರುದಿನವೇ ಈ ಯಶಸ್ಸನ್ನು ಸಂಭ್ರಮಿಸಬೇಕೆಂದುಕೊಂಡಿದ್ದ ಕ್ರಿಕೆಟ್ ಪ್ರೇಮಿಗಳು

ಬೆಂಗಳೂರಿಗೆ ಬಂದ ದೊಡ್ಮನೆ ಸೊಸೆ : ನಾಳೆ ಯುವ – ಶ್ರೀದೇವಿ ಡಿವೋರ್ಸ್ ಕೇಸ್ ವಿಚಾರಣೆ..!

ಬೆಂಗಳೂರು: ದೊಡ್ಮನೆ ಮೊಮ್ಮಗ ಯುವ ರಾಜ್‍ಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಜೋರು ಚರ್ಚೆಯೂ ಆಗಿತ್ತು. ವಿದೇಶದಲ್ಲಿದ್ದ ಶ್ರೀದೇವಿ ಭೈರಪ್ಪ ಬೆಂಗಳೂರಿಗೆ ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ನಾಳೆ ಫ್ಯಾಮಿಲಿ

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ.

error: Content is protected !!