ಅತಿಥಿ ಉಪನ್ಯಾಸಕರಿಗೆ ಅಶ್ವಥ್ ನಾರಾಯಣ್ ಕೊಡ್ತಾರಾ ಗುಡ್ ನ್ಯೂಸ್..?

suddionenews
1 Min Read

ಬೆಂಗಳೂರು: ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗಾಗ ಧ್ವನಿ ಎತ್ತುತ್ತಲೇ ಇರುತ್ತಾರೆ. ಇದೀಗ ಅವರಿಗೆ ಸಿಹಿ ಸುದ್ದಿ ನೀಡುವ ಮುನ್ಸೂಚನೆ ನೀಡಿದ್ದಾರೆ ಸಚಿವ ಅಶ್ವಥ್ ನಾರಾಯಣ್.

ಶೀಘ್ರದಲ್ಲೇ ರಾಜ್ಯದ 14 ಸಾವಿರ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ‌ನೀಡಲಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಸಚಿವ ಅಶ್ವಥ್ ನಾರಾಯಣ್, ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಶೀಘ್ರದಲ್ಲೇ ಸಿಹಿಸುದ್ದಿ ಕೊಡಲಿದ್ದೇವೆ. ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೋಸ್ಟ್ ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *