Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ಕೊಬ್ಬರಿ ರೈತರಿಗೆ ಗುಡ್ ನ್ಯೂಸ್ : ಖರೀದಿಗೆ ಮುಂದಾಯ್ತು ಕೇಂದ್ರ ಸರ್ಕಾರ

Facebook
Twitter
Telegram
WhatsApp

 

ಬೆಂಗಳೂರು: ಮಂಡ್ಯ, ಹಾಸನ, ತುಮಕೂರು, ದಕ್ಷಿಣ ಕನ್ನಡ, ರಾಮನಗರ ಭಾಗದಲ್ಲಿ ಕೊಬ್ಬರಿ ಬೆಳೆಗಾರರು ಅಧಿಕವಾಗಿದ್ದಾರೆ. ಇಲ್ಲಿನ ಬೆಳೆಗಾರರಿಗೆ ಬೆಂಬಲ ಬೆಲೆ ಸಿಕ್ಕರೆ ಅದಕ್ಕಿಂತ ಇನ್ನೇನು ಖುಷಿ ಬೇಕು ಹೇಳಿ. ಇದೀಗ ಕೇಂದ್ರ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಕೇಂದ್ರ ಸರ್ಕಾರ ಇದೀಗ ಕೊಬ್ಬರಿಯನ್ನು ಕೊಂಡುಕೊಳ್ಳುವುದಾಗಿ ತಿಳಿಸಿದೆ.

ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿಯನ್ನು ಖರೀದಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. 2024ನೇ ಸಾಲಿಗೆ ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ಕೊಬ್ಬರಿ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ.

ಕೊಬ್ಬರಿ ಖರೀದಿ ಸಂಬಂಧ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕೇಂದ್ರಕ್ಕೆ ಮನವಿ ಮಾಡಿದ್ದರು. ಈ ವರ್ಷದಲ್ಲಿ 2,999 ಮೆಟ್ರಿಕ್ ಟನ್ ಖರೀದಿಸಲಾಗುತ್ತದೆ. ಹೆಚ್ಚುವರಿ ಕೊಬ್ಬರಿಯನ್ನು ಖರೀದಿ ಮಾಡುವಂತೆ ಮನವಿ ಮಾಡಿದ್ದರು. 10 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದರು. ಇದರಿಂದ 2999 ಮೆಟ್ರಿಕ್ ಟನ್ ಜೊತೆಗೆ ಹೆಚ್ಚುವರಿಯಾಗಿ 7500 ಮೆಟ್ರಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇದೀಗ ಕೇಂದ್ರ ಸರ್ಕಾರ ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿ ಖರೀದಸಲಿದೆ. ಇದು ರೈತರಿಗೆ ತುಂಬಾನೇ ಖುಷಿಕೊಟ್ಟಂತ ಸುದ್ದಿಯಾಗಿದೆ. ಈ ಬಾರಿ ಬಂದ ಕೊಬ್ಬರಿಯನ್ನೆಲ್ಲಾ ರೈತರು ಮಾರುಕಟ್ಟೆಗ ಹಾಕಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!