Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಕೊಬ್ಬರಿ ರೈತರಿಗೆ ಗುಡ್ ನ್ಯೂಸ್ : ಖರೀದಿಗೆ ಮುಂದಾಯ್ತು ಕೇಂದ್ರ ಸರ್ಕಾರ

---Advertisement---

 

ಬೆಂಗಳೂರು: ಮಂಡ್ಯ, ಹಾಸನ, ತುಮಕೂರು, ದಕ್ಷಿಣ ಕನ್ನಡ, ರಾಮನಗರ ಭಾಗದಲ್ಲಿ ಕೊಬ್ಬರಿ ಬೆಳೆಗಾರರು ಅಧಿಕವಾಗಿದ್ದಾರೆ. ಇಲ್ಲಿನ ಬೆಳೆಗಾರರಿಗೆ ಬೆಂಬಲ ಬೆಲೆ ಸಿಕ್ಕರೆ ಅದಕ್ಕಿಂತ ಇನ್ನೇನು ಖುಷಿ ಬೇಕು ಹೇಳಿ. ಇದೀಗ ಕೇಂದ್ರ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಕೇಂದ್ರ ಸರ್ಕಾರ ಇದೀಗ ಕೊಬ್ಬರಿಯನ್ನು ಕೊಂಡುಕೊಳ್ಳುವುದಾಗಿ ತಿಳಿಸಿದೆ.

ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿಯನ್ನು ಖರೀದಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. 2024ನೇ ಸಾಲಿಗೆ ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ಕೊಬ್ಬರಿ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ.

ಕೊಬ್ಬರಿ ಖರೀದಿ ಸಂಬಂಧ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕೇಂದ್ರಕ್ಕೆ ಮನವಿ ಮಾಡಿದ್ದರು. ಈ ವರ್ಷದಲ್ಲಿ 2,999 ಮೆಟ್ರಿಕ್ ಟನ್ ಖರೀದಿಸಲಾಗುತ್ತದೆ. ಹೆಚ್ಚುವರಿ ಕೊಬ್ಬರಿಯನ್ನು ಖರೀದಿ ಮಾಡುವಂತೆ ಮನವಿ ಮಾಡಿದ್ದರು. 10 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದರು. ಇದರಿಂದ 2999 ಮೆಟ್ರಿಕ್ ಟನ್ ಜೊತೆಗೆ ಹೆಚ್ಚುವರಿಯಾಗಿ 7500 ಮೆಟ್ರಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇದೀಗ ಕೇಂದ್ರ ಸರ್ಕಾರ ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿ ಖರೀದಸಲಿದೆ. ಇದು ರೈತರಿಗೆ ತುಂಬಾನೇ ಖುಷಿಕೊಟ್ಟಂತ ಸುದ್ದಿಯಾಗಿದೆ. ಈ ಬಾರಿ ಬಂದ ಕೊಬ್ಬರಿಯನ್ನೆಲ್ಲಾ ರೈತರು ಮಾರುಕಟ್ಟೆಗ ಹಾಕಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...