ಬೆಂಗಳೂರು.ಜೂನ್.29: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಫ್ತು ಕುಸಿತದಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ತೋತಾಪುರಿ ಮಾವು ಬೆಳೆಗಾರರ ಬೆನ್ನಿಗೆ ಕರ್ನಾಟಕ ಸರ್ಕಾರ ನಿಂತಿದೆ. ಬೆಳೆಗಾರರ ನೆರವಿಗಾಗಿ ಸರ್ಕಾರವು ಒಟ್ಟು 58.54 ಕೋಟಿ ರೂಪಾಯಿಗಳ ಬೃಹತ್ ಆರ್ಥಿಕ ಪ್ಯಾಕೇಜ್ ಮಂಜೂರು ಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳು, ನಮ್ಮ ಸರ್ಕಾರ ಯಾವಾಗಲೂ ರೈತರ ಹಿತರಕ್ಷಣೆಗೆ ಬದ್ಧವಾಗಿದೆ. ರಫ್ತು ಮಾರುಕಟ್ಟೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ತಕ್ಷಣವೇ ಆರ್ಥಿಕ ನೆರವು ತಲುಪಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರವೇ ಮೊದಲು ಸಂಪೂರ್ಣ ಹಣವನ್ನು ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಮಾವು ಬೆಳೆಗಾರರ ಬೆನ್ನಿಗೆ ನಿಂತ ನಮ್ಮ ಸರ್ಕಾರ: ಆರ್ಥಿಕ ನೆರವಿನ ಹಸ್ತ!
ಇದನ್ನು ಓದಿ‘ಕುಂಡಲಿ’ ಭವಿಷ್ಯಕ್ಕೆ ಹೆದರಿ 28 ವರ್ಷದ ಐಟಿ ಎಂಜಿನಿಯರ್ ಗೆ ಡ್ರೈವಿಂಗ್ ನಿಷೇಧ: ದಿನವೂ ಆಫೀಸ್ ಗೆ ಬಿಡುವ ತಂದೆ!ರಫ್ತು ಮಾರುಕಟ್ಟೆ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ತೋತಾಪುರಿ ಮಾವು ಬೆಳೆಗಾರರ ರಕ್ಷಣೆಗಾಗಿ ಒಟ್ಟು ₹58.54 ಕೋಟಿ ಮಂಜೂರು ಮಾಡಲಾಗಿದೆ. ರೈತರಿಗೆ ತಡವಾಗಬಾರದೆಂದು ರಾಜ್ಯ ಸರ್ಕಾರವೇ ಮೊದಲು ಸಂಪೂರ್ಣ ಹಣವನ್ನು ಪಾವತಿಸುತ್ತಿದ್ದು, ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್… pic.twitter.com/FHOhTGndqd
— DK Shivakumar (@DKShivakumar) June 29, 2026
ಸರ್ಕಾರದ ಈ ಯೋಜನೆಯಡಿ ಅರ್ಹ ತೋತಾಪುರಿ ಮಾವು ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್ಗೆ ₹437.50 ರಂತೆ ನೇರ ಸಹಾಯಧನವನ್ನು ನೀಡಲಾಗುತ್ತದೆ. ಮಧ್ಯವರ್ತಿಗಳ ಹಾವಳಿ ಇಲ್ಲದೆ ಈ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ.
ಈ ಸಂಪೂರ್ಣ ಸಹಾಯಧನ ವಿತರಣಾ ಪ್ರಕ್ರಿಯೆಯನ್ನು ಮುಂದಿನ 30 ದಿನಗಳ ಒಳಗಾಗಿ ಪೂರ್ಣಗೊಳಿಸಿ, ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಸರ್ಕಾರದ ಈ ದಿಟ್ಟ ನಿರ್ಧಾರದಿಂದಾಗಿ ರಾಜ್ಯದ ಸಾವಿರಾರು ಮಾವು ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













