Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರವಾಡ ಮಂದಿಗೆ ಗುಡ್ ನ್ಯೂಸ್ : ಪ್ರತ್ಯೇಕ ಮಹಾನಗರ ಪಾಲಿಕೆಗೆ ಅನುಮತಿ

---Advertisement---

ಧಾರವಾಡ: ಹುಬ್ಬಳ್ಳಿ ಹಾಗೂ ಧಾರಾವಾಡ ಅವಳಿ ನಗರವಾಗಿವೆ. ಅಭಿವೃದ್ಧಿಗೆ ಏನೇ ಅನುದಾನ ಬಂದರು ಸಹ ಮೊದಲು ಹುಬ್ಬಳಿಯ ಅಭಿವೃದ್ಧಿ ಕಡೆಗೆ ಗಮನ ಹರಿಸುತ್ತಾರೆ. ಹುಬ್ಬಳ್ಳಿ ಅಭಿವೃದ್ಧಿ ಕಂಡಷ್ಟು ಧಾರವಾಡ ಅಭಿವೃದ್ಧಿಯಾಗಿಲ್ಲ ಎಂಬ ಬೇಸರ ಧಾರವಾಡ ಮಂದಿಯದ್ದು ಇದಕ್ಕಾಗಿ ಪ್ರತ್ಯೇಕ ಪಾಲಿಕೆ ಮಾಡಿ ಅಭಿವೃದ್ಧಿಯತ್ತ ಗಮನ ಹರಿಸಬೇಕೆಂದು ಹಲವು ದಶಕಗಳಿಂದ ಚಿಂತಕರು, ಸಾಹಿತಿಗಳು ಹೋರಾಟ ಮಾಡಿಕೊಂಡೆ ಬಂದಿದ್ದಾರೆ ಆ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ.

ಈ ಸಂಬಂಧ ಈಚೆಗಷ್ಟೇಹೋರಾಟಗಾರರು ನಿಯೋಗವೊಂದನ್ನ ತೆಗೆದುಕೊಂಡು ಹೋಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಸಚಿವ ಸಂತೋಷ್ ಲಾಡ್, ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಪ್ರತ್ಯೇಕ ಪಾಲಿಕೆಗೆ ಬೇಡಿಕೆ ಇಟ್ಟಿದ್ದರು. ಈ ಎಲ್ಲಾ ಬೆಳವಣಿಗೆಯ ಬಳಿಕ ಇದೀಗ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗೆ ಸರ್ಕಾರ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಓಕೆ ಎಂದಿದ್ದಾರೆ.

ಇದು ಧಾರವಾಡ ಮಂದಿಗೆ ಪೇಡ ತಿಂದಷ್ಟೇ ಖುಷಿ ನೀಡಿದೆ. ಧಾರವಾಡದಲ್ಲಿ 26 ವಾರ್ಡ್ ಗಳಿವೆ. ಹುಬ್ಬಳ್ಳಿಯಂತೆ ಧಾರವಾಡವೂ ಅಭಿವೃದ್ಧಿ ಕಾಣಬೇಕು ಅಂದ್ರೆ ಪ್ರತ್ಯೇಕ ಮಹಾನಗರ ಪಾಲಿಕೆಯಾಗಬೇಕು ಎಂದು ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಈ ಹೋರಾಟದ ಫಲವಾಗಿಯೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಎಲ್ಲರ ಒಪ್ಪಿಗೆ ಸಿಕ್ಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹೋರಾಟ ಮಾಡಿದವರೆಲ್ಲ ಪೇಡ ತಿನ್ನಿಸಿ ಸಂಭ್ರಮಿಸಿದ್ದಾರೆ. ಇನ್ಮುಂದೆ ಧಾರಾವಾಡ ಕೂಡ ಹುಬ್ಬಳ್ಳಿಯಂತೆ ಅಭಿವೃದ್ಧಿ ಕಾಣಲಿದೆ ಎಂಬ ಖುಷಿ ವ್ಯಕ್ತ ಪಡಿಸಿದ್ದಾರೆ. ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment