Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ; ಪ್ರವೇಶಾತಿ ದಂಡ ಶುಲ್ಕ ಸಂಪೂರ್ಣ ವಿನಾಯಿತಿ!

---Advertisement---

ಬೆಂಗಳೂರು.ಜುಲೈ.07: ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗುವಂತೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ತಡವಾಗಿ ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ದಾಖಲಾತಿ ದಂಡ ಶುಲ್ಕ ಮತ್ತು ವಿಶೇಷ ದಂಡ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಣದ ಕೊರತೆಯಿಂದಾಗಿ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದಾತ್ತ ಉದ್ದೇಶದಿಂದ ಈ ಮಹತ್ತರ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಿ ಕಾಲೇಜುಗಳನ್ನು ಆಶ್ರಯಿಸುವ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದರೂ ಪ್ರತಿಭಾವಂತರಾಗಿರುತ್ತಾರೆ. ಅಂತಹ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಸರ್ಕಾರ ಈ ವಿನಾಯಿತಿ ನಿಯಮವನ್ನು ಜಾರಿಗೆ ತಂದಿದೆ.

ಈ ನೂತನ ಆದೇಶದ ಪ್ರಕಾರ, ತಡವಾಗಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ 670 ರೂಪಾಯಿಗಳ ‘ದಾಖಲಾತಿ ದಂಡ ಶುಲ್ಕ’ ಹಾಗೂ 2,220 ರೂಪಾಯಿಗಳ ‘ವಿಶೇಷ ದಂಡ ಶುಲ್ಕ’ದಿಂದ ಇನ್ನು ಮುಂದೆ ಮುಕ್ತಿ ಸಿಗಲಿದೆ. ಸರ್ಕಾರದ ಈ ಪ್ರಶಂಸನೀಯ ಕ್ರಮವು ಬಡ ವಿದ್ಯಾರ್ಥಿಗಳ ಪೋಷಕರಿಗೆ ದೊಡ್ಡ ಮಟ್ಟದ ನಿರಾಳತೆ ತಂದಿದೆ.

Join WhatsApp

Join Now

Join Telegram

Join Now