ಎಲ್ನಿನೋ ಪರಿಣಾಮದಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಕೊರತೆಯ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಡಿತರ ಚೀಟಿದಾರರಿಗೆ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ರೇಷನ್ ಅಕ್ಕಿಯನ್ನು ಒಂದೇ ಬಾರಿ ವಿತರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ನಿರ್ದೇಶನದಂತೆ, 2026ರ ಆಗಸ್ಟ್ 1ರಿಂದಲೇ ಮೂರು ತಿಂಗಳ ಪಡಿತರ ವಿತರಣೆಗೆ ಚಾಲನೆ ಸಿಗಲಿದೆ. ಮಳೆಗಾಲದಲ್ಲಿ ರಸ್ತೆ ಸಂಪರ್ಕ, ಸಾರಿಗೆ ಹಾಗೂ ದಾಸ್ತಾನು ಸಮಸ್ಯೆಗಳು ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಇದರ ಮೂಲಕ ಫಲಾನುಭವಿಗಳಿಗೆ ನಿರಂತರವಾಗಿ ಆಹಾರ ಧಾನ್ಯ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ.
ಸಾಮಾನ್ಯವಾಗಿ ಪ್ರತಿ ತಿಂಗಳ 1ರಿಂದ 15ನೇ ತಾರೀಖಿನವರೆಗೆ ಮಾತ್ರ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯುತ್ತಿತ್ತು. ಆದರೆ ಈ ಬಾರಿ ಮೂರು ತಿಂಗಳ ಪಡಿತರವನ್ನು ಒಂದೇ ಅವಧಿಯಲ್ಲಿ ನೀಡಲಾಗುತ್ತಿರುವುದರಿಂದ, ಆಗಸ್ಟ್ ತಿಂಗಳ ಪೂರ್ತಿ 31 ದಿನಗಳ ಕಾಲ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲಿವೆ.
ಮೂರು ತಿಂಗಳ ಪಡಿತರ ಪಡೆಯುವ ವೇಳೆ ಫಲಾನುಭವಿಗಳು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಮೂರು ಬಾರಿ ಹೆಬ್ಬೆರಳಿನ ಗುರುತು ನೀಡುವುದು ಕಡ್ಡಾಯವಾಗಿದೆ. ಅಗತ್ಯ ಪ್ರಮಾಣದ ಅಕ್ಕಿಯನ್ನು ಎಂಎಲ್ಎಸ್ (MLS) ಗೋದಾಮುಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಹಂತ ಹಂತವಾಗಿ ಸಾಗಿಸಲಾಗುತ್ತದೆ. ಸಣ್ಣ ಅಂಗಡಿಗಳಿಗೆ ಒಂದೇ ಬಾರಿ ಹಾಗೂ ದೊಡ್ಡ ಅಂಗಡಿಗಳಿಗೆ ದಾಸ್ತಾನು ಸಾಮರ್ಥ್ಯಕ್ಕೆ ಅನುಗುಣವಾಗಿ ಎರಡು ಅಥವಾ ಮೂರು ಕಂತುಗಳಲ್ಲಿ ಪೂರೈಕೆ ಮಾಡಲಾಗುತ್ತದೆ. ಇದೇ ಮಾದರಿಯಲ್ಲಿ ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಪಡಿತರವನ್ನೂ ಸರ್ಕಾರ ಒಂದೇ ಅವಧಿಯಲ್ಲಿ ವಿತರಿಸಿತ್ತು. ಇದೀಗ ಮತ್ತೊಮ್ಮೆ ಇದೇ ವ್ಯವಸ್ಥೆಯನ್ನು ಮುಂದುವರಿಸಲಾಗಿದ್ದು, ಲಕ್ಷಾಂತರ ಪಡಿತರ ಚೀಟಿದಾರರಿಗೆ ಇದರಿಂದ ಅನುಕೂಲವಾಗಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








