Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : DA ಹೆಚ್ಚಿಸಿದ ಸಿಎಂ ಸಿದ್ದರಾಮಯ್ಯ

---Advertisement---

 

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರವಾಗಲೇ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಭರ್ಜರಿ ಉಡುಗೊರೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನಯ ಹೆಚ್ಚಳ ಮಾಡಿದೆ. ಯುಗಾದಿಗೂ ಮುನ್ನವೇ ಸರ್ಕಾರಿ ನೌಕರರಿಗೆ ಸಿಹಿಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಈ ನಿರ್ಧಾರದಿಂದ ಫುಲ್ ಖುಷಿಯಾಗಿದ್ದಾರೆ.

ರಾಜ್ಯ ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದ್ದು, ನೌಕರರ ಭತ್ಯೆಯನ್ನು ಶೇಕಡಾ 3.75ರಷ್ಟು ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರದ ವೇತನ ನೀತಿಯನಂತೆ ಸಂಬಳ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 4 ರಷ್ಟು ಹೆಚ್ಚಳ‌ ಮಾಡಲಾಗಿದೆ. ಸರ್ಕಾರಿ ನೌಕರರಿಗೇನೋ ಖುಷಿಯ ವಿಚಾರ. ಆದರೆ ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಹೆಚ್ಚಿನ ಹೊರೆಯಾಗಲಿದೆ.

 

ಈ ತುಟ್ಟಿ ಭತ್ಯೆ ಏರಿಕೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪ್ರತಿ ವರ್ಷವೂ 1,792 ಕೋಟಿ ರೂಪಾಯಿ ಹೆಚ್ಚುವರಿಯಾವಿ ಬೇಕಾಗಲಿದೆ. 2024ರ ಜನವರಿ 1ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆ ಏರಿಕೆ ಆಗುತ್ತದೆ. ಶೇ. 38.75 ರಿಂದ ಶೇ 42.5ಕ್ಕರ ಇದು ಹೆಚ್ಚಳವಾಗಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಒಟ್ನಲ್ಲಿ TA-DA ಗಾಗಿ ಕಾಯ್ತಿದ್ದ ನೌಕರರಿಗೆ ಸದ್ಯಕ್ಕೆ ಬಂಪರ್ ಬಹುಮಾನ ಅಂತಾನೇ ಹೇಳಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...