Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜಾತಿ ಗಣತಿ ಸಮೀಕ್ಷೆ ನಡೆಸುತ್ತಿರೋ ಶಿಕ್ಷಕರಿಗೆ ಗುಡ್ ನ್ಯೂಸ್ : ಗೌರವ ಧನ ಬಿಡುಗಡೆ

---Advertisement---

ಬೆಂಗಳೂರು: ಜಾತಿ ಗಣತಿ ಸರ್ವೇ ಆರಂಭವಾಗಿದೆ. ಆದ್ರೆ ಶಿಕ್ಷಕರ ಪಾಡು ಕೇಳೋದು ಯಾರು. ಹೇಳಿದಷ್ಟೇ ಸುಲಭದ್ದಾಗಿಲ್ಲ ಸರ್ವೇ ಮಾಡುವುದು. ಹಳ್ಳಿ ಹಳ್ಳಿಗಳಿಗೆ ಹೋಗಬೇಕು. ಅಲ್ಲಿ ನೆಟ್ವರ್ಕ್ ಸಿಗಲ್ಲ. ನೆಟ್ವರ್ಕ್ ಸರಿ ಇರೋ ಶಿಕ್ಷಕರಿಗೆ ಸರ್ವರ್ ವರ್ಕ್ ಆಗಲ್ಲ. ಶಿಕ್ಷಕರ ಸಂಕಷ್ಟ ಒಂದಿಷ್ಟಲ್ಲ. ಈ ಎಲ್ಲಾ ಸಮಸ್ಯೆಗಳ ನಡುವೆಯೂ ಸರ್ಕಾರ ಸೂಚಿಸಿರುವ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಹಿಂದೂಳಿದ ಆಯೋಗ ಗುಡ್ ನ್ಯೂಸ್ ನೀಡಿದೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿರುವ ಶಿಕ್ಷಕರಿಗೆ ಗೌರವ ಧನ ನೀಡಿದೆ. ರಾಜ್ಯಾದ್ಯಂತ ಸಮೀಕ್ಷೆ ಮಾಡುತ್ತಿರುವ 1 ಲಕ್ಷದ 20,728 ಶಿಕ್ಷಕರಿಗೆ ತಲಾ ಐದು ಸಾವಿರ ರೂಪಾಯಿ ಬಿಡುಗಡೆ ಮಾಡಲಾಗಿದೆ. ಜೊತೆಗೆ ಪ್ರತಿ ಮನೆ ಸಮೀಕ್ಷೆಗೆ 100 ರೂಪಾಯಿ ನಿಗರಿ ಮಾಡಲಾಗಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಹಿಂದುಳಿದ ವರ್ಗಗಳ ಆಯೋಗ 60,36,40000 ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ.

 

ಇದರ ಬೆನ್ನಲ್ಲೇ ಸಮೀಕ್ಷೆಯಲ್ಲಿ ಗೈರಾದವರಿಗೆ ಜಿಲ್ಲಾಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಕೋಲಾರ ಜಿಲ್ಲೆಯ 6 ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ. ಕೋಲಾರ ಜಿಲ್ಲೆಯಲ್ಲಿ ನಿನ್ನೆ ಬರೋಬ್ಬರಿ 645 ಸಿಬ್ಬಂದಿ ಕರ್ತವ್ಯದಲ್ಲಿ ಭಾಗಿಯಾಗದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ವರದಿಯಾಗಿದೆ. ಎಲ್ಲೆಲ್ಲಿ ಎಷ್ಟು ಶಿಕ್ಷಕರು ಗೈರಾಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ. ಕೋಲಾರ ಜಿಲ್ಲೆಯ ಭಾಗದಲ್ಲಿ 179 ಶಿಕ್ಷಕರು ಬಂಗಾರಪೇಟೆ ಭಾಗದಲ್ಲಿ 96 ಶಿಕ್ಷಕರು, ಕೆಜಿಎಫ್ ಭಾಗದಲ್ಲಿ 88 ಶಿಕ್ಷಕರು, ಮಾಲೂರು ಭಾಗದಲ್ಲಿ 141 ಶಿಕ್ಷಕರು, ಮುಳಬಾಗಿಲು ಕ್ಷೇತ್ರದಲ್ಲಿ 127 ಶಿಕ್ಷಕರು, ಹಾಗೇ ಶ್ರೀನಿವಾಸಪುರ ಕ್ಷೇತ್ರದಲ್ಲಿ 14 ಶಿಕ್ಷಕ ಸಿಬ್ಬಂದಿಗಳು ಸಮೀಕ್ಷೆಗೆ ಗೈರಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...