Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸರಿಗೆ ಗುಡ್ ನ್ಯೂಸ್ : ವಿಮಾ ಹಣ 50 ಲಕ್ಷಕ್ಕೆ ಏರಿಕೆ..!

Facebook
Twitter
Telegram
WhatsApp

 

ಪೊಲೀಸರಿಗೆಂದೆ ಗುಂಪು ವಿಮಾ ಯೋಜನೆ ಇದೆ‌. ಅದರಲ್ಲಿ ಪೊಲೀಸರಿಗೆ 20 ಲಕ್ಷ ಹಣ ಸಿಗಲಿದೆ. ಆದರೆ ಆ ಮೊತ್ತ ಏರಿಕೆಯಾಗಿದ್ದು, ಪೊಲೀಸರಿಗೆ ಸಂತಸ ತಂದಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಇಲಾಖೆ ಇಂದು ಆದೇಶ ಹೊರಡಿಸಿದೆ. ಈ ಆದೇಶದಿಂದ ಪೊಲೀಸರು ಖುಷಿಯಾಗಿದ್ದಾರೆ. 20 ಲಕ್ಷವಿದ್ದ ವಿಮೆ ಈಗ 50 ಲಕ್ಷಕ್ಕೆ ಏರಿಕೆಯಾಗಿದೆ.

ಕಳೆದ ವರ್ಷ ಅಂದ್ರೆ 2023ರಲ್ಲಿ ಆಚರಿಸಿದ ಪೊಲೀಸರ ಹುತಾತ್ಮರ ದಿನಾಚರಣೆಯ ವಿಶೇಷ ದಿನದಂದು ಪೊಲೀಸ್ ಇಲಾಖೆ ಈ ಸಂಬಂಧ ಭರವಸೆ ನೀಡಿತ್ತು. ವಿಮಾ ಯೋಜನೆಯನ್ನು ಹೆಚ್ಚಿಸುವುದಾಗಿಯೂ ತಿಳಿಸಿತ್ತು. ಇದೀಗ ಕೊಟ್ಟ ಮಾತಿನಂತೆ ವಿಮಾ ಯೋಜನಾ ಮೊತ್ತವನ್ನು ಹೆಚ್ಚಿಸಿ, ಆದೇಶ ಹೊರಡಿಸಿದೆ. ಈ ಯೋಜನೆಗಳು ಪೊಲೀಸರ ಕುಟುಂಬಕ್ಕೆ ಬಹಳ ಅನುಕೂಲವಾಗಲಿದೆ. ಇದರ ಜೊತೆಗೆ ಪೊಲೀಸರಿಗೂ ಇದು ಪಾಸಿಟಿವ್ ಆಗಿ ವರ್ಕ್ ಆಗಲಿದೆ. ಅವರಿಗೆ ಇನ್ನಷ್ಟು ಹುಮ್ಮಸ್ಸು ಬರಲಿದೆ.

ಈ ಗುಂಪು ವಿಮಾ ಪೊಲೀಸರ ಕುಟುಂಬಸ್ಥರಿಗೆ ಅನುಕೂಲವಾಗಲಿದೆ. ಕರ್ತವ್ಯದಲ್ಲಿದ್ದಾಗಲೇ ಪೊಲೀಸರು ಮೃತಪಟ್ಟರೆ ಈ ಗುಂಪು ವಿಮಾ ಯೋಜನೆಯ ಹಣವನ್ನು ಕುಟುಂಬಸ್ಥರು ಪಡೆಯಬಹುದು. ಈ ಯೋಜನೆ ಫಾಲೋವರ್, ಪಿಸಿ, ಡಿಜಿಯಿಂದ ಹಿಡಿದು ಐಜಿಪಿವರಗೂ ಅನ್ವಯವಾಗಲಿದೆ‌. ಒಇ ರೀತಿಯಾದ ಯೋಜನೆಗಳು ಅಧಿಕಾರಿ, ಸಿಬ್ಬಂದಿಗಳ ಮನಸ್ಥಿತಿಯನ್ನು ಸುಧಾರಿಸುವುದರ ಜೊತೆಗೆ ಮುಂದೆ ಅವರ ಕೆಲಸಕ್ಕೆ ಹೆಚ್ಚು ಪ್ರೇರಣೆ ಸಿಗಲಿದೆ. ಯಾಕಂದ್ರೆ ಪೊಲೀಸ್ ಅಧಿಕಾರಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಕರ್ತವ್ಯ ಮಾಡುತ್ತಾರೆ. ಈ ಸಂದರ್ಭದಲ್ಲಿ ತಮ್ಮ ಕುಟುಂಬಕ್ಕೆ ಸೆಕ್ಯೂರ್ ಎಂಬ ಭಾವನೆಯನ್ನು ಅವರಿಗೆ ನೀಡುವುದು ಬಹಳ ಮುಖ್ಯವಾಗುತ್ತದೆ. ಈಗ ಪೊಲೀಸ್ ಇಲಾಖೆಯ ಈ ನಿರ್ಧಾರಕ್ಕೆ ಪೊಲೀಸರು ಖುಷಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬ್ಯಾಂಕ್ ನಿರ್ಲಕ್ಷ್ಯ : ಬಡ್ಡಿ ಸಮೇತ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

   ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ

ಪೊಲೀಸರಿಗೆ ಗುಡ್ ನ್ಯೂಸ್ : ವಿಮಾ ಹಣ 50 ಲಕ್ಷಕ್ಕೆ ಏರಿಕೆ..!

  ಪೊಲೀಸರಿಗೆಂದೆ ಗುಂಪು ವಿಮಾ ಯೋಜನೆ ಇದೆ‌. ಅದರಲ್ಲಿ ಪೊಲೀಸರಿಗೆ 20 ಲಕ್ಷ ಹಣ ಸಿಗಲಿದೆ. ಆದರೆ ಆ ಮೊತ್ತ ಏರಿಕೆಯಾಗಿದ್ದು, ಪೊಲೀಸರಿಗೆ ಸಂತಸ ತಂದಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಇಲಾಖೆ ಇಂದು

ಟಿಕೆಟ್ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿಗೆ ರಾಜೀನಾಮೆ ನೀಡುವಂತೆ ಒತ್ತಾಯ

  ಬೆಂಗಳೂರು: ಗೋಪಾಲ್ ಜೋಶಿಯವರ ವಿರುದ್ಧ ದಾಖಲಾದ ಕೇಸ್ ಸಂಬಂಧ ಸಚಿವ ದಿನೇಶ್ ಗುಂಡೂರಾವ್, ಇದೀಗ ಪ್ರಹ್ಲಾದ್ ಜೋಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ನೀವೂ ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದೇ

error: Content is protected !!