Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸರಿಗೆ ಗುಡ್ ನ್ಯೂಸ್ : ವಿಮಾ ಹಣ 50 ಲಕ್ಷಕ್ಕೆ ಏರಿಕೆ..!

---Advertisement---

 

ಪೊಲೀಸರಿಗೆಂದೆ ಗುಂಪು ವಿಮಾ ಯೋಜನೆ ಇದೆ‌. ಅದರಲ್ಲಿ ಪೊಲೀಸರಿಗೆ 20 ಲಕ್ಷ ಹಣ ಸಿಗಲಿದೆ. ಆದರೆ ಆ ಮೊತ್ತ ಏರಿಕೆಯಾಗಿದ್ದು, ಪೊಲೀಸರಿಗೆ ಸಂತಸ ತಂದಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಇಲಾಖೆ ಇಂದು ಆದೇಶ ಹೊರಡಿಸಿದೆ. ಈ ಆದೇಶದಿಂದ ಪೊಲೀಸರು ಖುಷಿಯಾಗಿದ್ದಾರೆ. 20 ಲಕ್ಷವಿದ್ದ ವಿಮೆ ಈಗ 50 ಲಕ್ಷಕ್ಕೆ ಏರಿಕೆಯಾಗಿದೆ.

ಕಳೆದ ವರ್ಷ ಅಂದ್ರೆ 2023ರಲ್ಲಿ ಆಚರಿಸಿದ ಪೊಲೀಸರ ಹುತಾತ್ಮರ ದಿನಾಚರಣೆಯ ವಿಶೇಷ ದಿನದಂದು ಪೊಲೀಸ್ ಇಲಾಖೆ ಈ ಸಂಬಂಧ ಭರವಸೆ ನೀಡಿತ್ತು. ವಿಮಾ ಯೋಜನೆಯನ್ನು ಹೆಚ್ಚಿಸುವುದಾಗಿಯೂ ತಿಳಿಸಿತ್ತು. ಇದೀಗ ಕೊಟ್ಟ ಮಾತಿನಂತೆ ವಿಮಾ ಯೋಜನಾ ಮೊತ್ತವನ್ನು ಹೆಚ್ಚಿಸಿ, ಆದೇಶ ಹೊರಡಿಸಿದೆ. ಈ ಯೋಜನೆಗಳು ಪೊಲೀಸರ ಕುಟುಂಬಕ್ಕೆ ಬಹಳ ಅನುಕೂಲವಾಗಲಿದೆ. ಇದರ ಜೊತೆಗೆ ಪೊಲೀಸರಿಗೂ ಇದು ಪಾಸಿಟಿವ್ ಆಗಿ ವರ್ಕ್ ಆಗಲಿದೆ. ಅವರಿಗೆ ಇನ್ನಷ್ಟು ಹುಮ್ಮಸ್ಸು ಬರಲಿದೆ.

ಈ ಗುಂಪು ವಿಮಾ ಪೊಲೀಸರ ಕುಟುಂಬಸ್ಥರಿಗೆ ಅನುಕೂಲವಾಗಲಿದೆ. ಕರ್ತವ್ಯದಲ್ಲಿದ್ದಾಗಲೇ ಪೊಲೀಸರು ಮೃತಪಟ್ಟರೆ ಈ ಗುಂಪು ವಿಮಾ ಯೋಜನೆಯ ಹಣವನ್ನು ಕುಟುಂಬಸ್ಥರು ಪಡೆಯಬಹುದು. ಈ ಯೋಜನೆ ಫಾಲೋವರ್, ಪಿಸಿ, ಡಿಜಿಯಿಂದ ಹಿಡಿದು ಐಜಿಪಿವರಗೂ ಅನ್ವಯವಾಗಲಿದೆ‌. ಒಇ ರೀತಿಯಾದ ಯೋಜನೆಗಳು ಅಧಿಕಾರಿ, ಸಿಬ್ಬಂದಿಗಳ ಮನಸ್ಥಿತಿಯನ್ನು ಸುಧಾರಿಸುವುದರ ಜೊತೆಗೆ ಮುಂದೆ ಅವರ ಕೆಲಸಕ್ಕೆ ಹೆಚ್ಚು ಪ್ರೇರಣೆ ಸಿಗಲಿದೆ. ಯಾಕಂದ್ರೆ ಪೊಲೀಸ್ ಅಧಿಕಾರಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಕರ್ತವ್ಯ ಮಾಡುತ್ತಾರೆ. ಈ ಸಂದರ್ಭದಲ್ಲಿ ತಮ್ಮ ಕುಟುಂಬಕ್ಕೆ ಸೆಕ್ಯೂರ್ ಎಂಬ ಭಾವನೆಯನ್ನು ಅವರಿಗೆ ನೀಡುವುದು ಬಹಳ ಮುಖ್ಯವಾಗುತ್ತದೆ. ಈಗ ಪೊಲೀಸ್ ಇಲಾಖೆಯ ಈ ನಿರ್ಧಾರಕ್ಕೆ ಪೊಲೀಸರು ಖುಷಿಯಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment