Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಸಂಸದ ಬಿವೈ ರಾಘವೇಂದ್ರ ಹೇಳಿದ್ದೇನು..?

---Advertisement---

 

ಶಿವಮೊಗ್ಗ: ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಆರಂಭಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ, ಸಂಸದ ಬಿವೈ ರಾಘವೇಂದ್ರ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭದ್ರಾವತಿ ಜನರಿಗೆ ಖುಷಿ ಸುದ್ದಿಯನ್ನು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿವೈ ರಾಘವೇಂದ್ರ ಅವರು, ಭದ್ರಾವತಿಗೆ ಮತ್ತೆ ವೈಭವ! ಐಕಾನಿಕ್ #VISL ಮತ್ತೆ ಜೀವಕ್ಕೆ ಬರಲಿದೆ. VISL ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು SAIL ನಿರ್ವಹಣೆಯು ಅಂತಿಮವಾಗಿ ಒಪ್ಪಿಕೊಂಡಿದೆ ಎಂದು ಘೋಷಿಸಲು ನನಗೆ ಅತೀವ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿ, ಕೇಂದ್ರ ಸಚಿವರಿಗೆ ಟ್ಯಾಗ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಬರೋಬ್ಬರಿ 34 ವರ್ಷಗಳ ಹಿಂದೆ ಅಂದರೆ 1989ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಐಎಸ್‌ಎಲ್‌ ಕಾರ್ಖಾನೆಯನ್ನು ಒಪ್ಪಿಸಿತ್ತು. ನಷ್ಟದಲ್ಲಿದ್ದ ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚಲು ಕೇಂದ್ರ ಸರ್ಕಾರ ಹೊರಟಿತ್ತು. ಕೊನೆಗೂ ಭದ್ರಾವತಿ ಜನರ ನಿರಂತರ ಹೋರಾಟದ ಫಲವಾಗಿ ಇಂದು ಮತ್ತೆ ಆರಂಭಗೊಳ್ಳುವ ಹಂತಕ್ಕೆ ತಲುಪಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಭದ್ರಾವತಿಯ ಮಂದಿ ಸಂತಸಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...