Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ

---Advertisement---

ಬೆಂಗಳೂರು: ಇದು ಪರೀಕ್ಷೆಯ ಸಮಯ. ಹೊರಗೆ ಬಂದ್ರೆ ಬಿಸಿಲಿನ ತಾಪ ಮೈ ಸುಡುತ್ತಿದೆ. ಇದರ ಜೊತೆಗೆ ಪರೀಕ್ಷೆ ಎಂಬ ಭಯವೂ ಆವರಿಸಿದೆ. ಇದೇ ವೇಳೆ ಸರ್ಕಾರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಮಾನವೀಯ ದೃಷ್ಟಿಯಿಂದ ಯೋಚನೆ ಮಾಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ.

 

ಈಗಾಗಲೇ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದು, ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 25 ರಿಂದ ಏಪ್ರಿಲ್ 6ರ ತನಕ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಪರೀಕ್ಷೆ ಮುಗಿಯುವ ತನಕ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟದ ವ್ಯವಸ್ಥೆ ಮಾಡಿ, ಮಕ್ಕಳಿಗೆ ನೀಡಲು ಸೂಚನೆ ನೀಡಿದೆ.

ಇದರ ಜೊತೆಗೆ ಪರೀಕ್ಚೆ ಬರೆಯಲು ಬರುವ ಮಕ್ಕಳ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಮಕ್ಕಳಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು. ಮಕ್ಕಳ ಸುರಕ್ಷತೆ ಹಾಗೂ ಉತ್ತಮ ಗುಣಮಟ್ಟದ ಆರೋಗ್ಯಕರ ಆಹಾರದ ಸ್ವಚ್ಛತೆ ಮತ್ತು ನೈರ್ಮಲ್ಯ ನೋಡಿಕೊಳ್ಳಬೇಕು. ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು, ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿ ಆದ್ಯತೆ ನೀಡಬೇಕು. ಮಕ್ಕಳ ಪರೀಕ್ಷೆಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ.

ಬಿರು ಬೇಸಿಗೆ ಶುರುವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಮಕ್ಕಳು ದೂರ ದೂರಿನಿಂದ ಬಂದಿರುತ್ತಾರೆ. ಪರೀಕ್ಷಾ ಕೇಂದ್ರಗಳು ಇರುವುದೆಲ್ಲೋ ಅವರ ಪ್ರಯಾಣ ಸಾಗುವುದು ಇನ್ನೆಲ್ಲೋ. ಹೀಗಾಗಿ ಪರೀಕ್ಷೆ ಮುಗಿಸಿ ಹೋಗುವಾಗ ಮಕ್ಕಳ ಹಸಿವನ್ನು ತೀರಿಸಲು ಸರ್ಕಾರ ಚಿಂತನೆ ನಡೆಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...