Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ವಿದ್ಯುತ್ ದರ ಯುನಿಟ್ ಗೆ 1 ರೂ. ಇಳಿಕೆ

Facebook
Twitter
Telegram
WhatsApp

 

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದೆ. ಆದರೆ ಸರ್ಕಾರ ಅನುಮತಿ ನೀಡಿರುವ ಉಚಿತ ವಿದ್ಯುತ್ ಗಿಂತ ಹಡಚ್ಚಿನ ಯುನಿಟ್ ಬಳಸುವವರಿಗೆ ಮಾತ್ರ ಉಚಿತ ಭಾಗ್ಯ ಸಿಕ್ಕಿಲ್ಲ. ಇನ್ನು ವಾಣಿಜ್ಯ ಉದ್ದಿಮೆದಾರರಿಗೂ ಉಚಿತ ಭಾಗ್ಯ ಸಿಕ್ಕಿಲ್ಲ. ಇದೀಗ ವಿದ್ಯುತ್ ಬಿಲ್ ಪಾವತಿ ಮಾಡುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

 

ಸರಾಸರಿ 100 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗರ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 1 ರೂಪಾಯಿ 10 ಪೈಸೆಯಂತೆ ಇಳಿಕೆ ಮಾಡಲು ಆದೇಶ ನೀಡಿದೆ. ಅಷ್ಟೇ ಅಲ್ಲ ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ ಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಈ ಮೂಲಕ ವಾಣಿಜ್ಯ ಬಳಕೆದಾರರಿಗೂ ಬಿಗ್ ರಿಲೀಫ್ ನೀಡಿದೆ. ಜೊತೆಗೆ ಶಿಕ್ಷಣ ಮತ್ತು ಆಸ್ಪತ್ರೆಗಳಿಗೆ ಯೂನಿಟ್ ಗೆ 20 ಪೈಸೆ, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಕಡಿತ ಮಾಡಲಾಗಿದೆ.

 

ಇನ್ನು ರಾಜ್ಯ ಸರ್ಕಾರ ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಈ ಪರಿಷ್ಕೃತ ದರ ಇದೇ ಮಾರ್ಚ್ 1ರಿಂದ ಅನ್ವಯವಾಗಲಿದೆ. 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ಅದಕ್ಕಿಂತ ಕಡಿಮೆ ಯೂನಿಟ್ ಬಳಕೆ ಮಾಡುವವರು ರಿಯಾಯಿತಿಗಾಗಿ ಹೆಚ್ಚಿನ ವಿದ್ಯುತ್ ಬಳಕೆ ಮಾಡದೆ, ಜನ ಹಿತಮಿತವಾಗಿ ಬಳಕೆ ಮಾಡುವುದು ಉತ್ತಮ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!