Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಉತ್ತಮ ಮಳೆ : ಮುಂದಿನ ಇನ್ನೆರಡು ದಿನಗಳು ಮಳೆ ಮುಂದುವರಿಕೆ

---Advertisement---

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಕೈಕೊಟ್ಟಿದೆ. ಈಗ ಹಿಂಗಾರು ಉತ್ತಮವಾಗುವ ಎಲ್ಲಾ ಸೂಚನೆಗಳು ಕಾಣುತ್ತಿವೆ. ಕಳೆದ ಎರಡ್ಮೂರು ದಿನದಿಂದ ರಾಜ್ಯಾದ್ಯಂತ ಜೋರು ಮಳೆಯಾಗುತ್ತಿದೆ. ಮುಂದಿನ ಇನ್ನು ಎರಡು ದಿನ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ನವೆಂಬರ್ 10ರ ತನಕ ಉತ್ತಮ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ಹಲವೆಡೆ ಮುಂದಿನ ಎರಡು ದಿನಗಳಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

 

ನವೆಂಬರ್ 10ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ತುಮಕೂರು, ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 11 ರಿಂದ 14 ರವರೆಗೆ ರಾಜ್ಯದಲ್ಲಿ ಬಹುತೇಕ ಒಣಹವೆ ಇರಲಿದ್ದು, ನವೆಂಬರ್ 15ರಿಂದ ಮತ್ತೆ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 15ರಂದು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment