ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಈ ಬಾರಿಯ ರಾಜಕೀಯ ಕಣ ಸಿಕ್ಕಾಪಟ್ಟೆ ಬ್ಯುಸಿಯಾಗಿದೆ. ಇಷ್ಟು ದಿನ ಜೆಡಿಎಸ್ ಪ್ರಾಬಲ್ಯ ಇರುವಡೆಗೆ ಸೀರಿಯಸ್ ಆಗಿ ಕಣ್ಣು ಹಾಯಿಸದ ಬಿಜೆಪಿ ಈ ಬಾರಿ ಆ ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣತೊಟ್ಟಿದೆ. ಹೀಗಾಗಿ ಹಳೆ ಮೈಸೂರು ಭಾಗದಲ್ಲಿ ಓಡಾಟ ಜೋರಾಗಿ ನಡೆಯುತ್ತಾ ಇದೆ.
ಹೇಳಿ ಕೇಳಿ ಹಳೆ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆ ಇದ್ದಂತೆ. ಇಲ್ಲಿ ಜೆಡಿಎಸ್ ಗೆಲುವು ಖಚಿತವಾಗಿದೆ. ಆದರೆ ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿಯಾಗಿ, ಪ್ರಚಾರ ಕಾರ್ಯ ಕೂಡ ನಡೆಸಿದ್ದಾರೆ. ಯಾರೊಂದಿಗೂ ಒಪ್ಪಂದಗಳು ಬೇಡ, ಸ್ವತಂತ್ರವಾಗಿ ಪಕ್ಷ ಸ್ಥಾಪನೆ ಮಾಡಬೇಕೆಂಬ ನುಡಿಯನ್ನು ನುಡಿದು ಹೋಗಿದ್ದಾರೆ.
ಅಮಿತ್ ಶಾ ಅವರ ಮಾತಿನಿಂದ ಸಮ್ಮಿಶ್ರ ಮಾಡಿಕೊಳ್ಳುವುದು ಡೌಟ್ ಎಂದೇ ಭಾವಿಸಲಾಗಿದೆ. ಬಳಿಕ ಬಿಜೆಪಿ ಎಚ್ಚರವಹಿಸಿದೆ. ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಗೆಲ್ಲುವುದಕ್ಕೆ ಏನೆಲ್ಲಾ ಮಾಡಬೇಕು ಎಂಬ ಲೆಕ್ಕಚಾರ ಹಾಕುವುದಕ್ಕೆ ಶುರು ಮಾಡಿದೆ. ಅದರ ಭಾಗವಾಗಿಯೇ ಇಂದು ಮಂಡ್ಯ ಉಸ್ತುವಾರಿಯನ್ನು ಬದಲಾಯಿಸಿದ್ದಾರೆ.
ಈ ಹಿಂದೆ ಸಚಿವ ಗೋಪಾಲಯ್ಯ ಅವರನ್ನು ಮಂಡ್ಯ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಈ ಭಾಗದಲ್ಲಿ ಒಕ್ಕಲಿಗರ ಸಂಖ್ಯೆ ಅಧಿಕವಾಗಿರುವ ಕಾರಣ ಈಗ ಉಸ್ತುವಾರಿಯನ್ನು ಗೋಪಾಲಯ್ಯ ಕೈಯಿಂದ ತೆಗೆದುಕೊಂಡು ನೇರವಾಗಿ ಸಚಿವ ಆರ್ ಅಶೋಕ್ ಕೈಗೆ ಇಟ್ಟಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್