Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೋಪಾಲಯ್ಯ ಕೈಜಾರಿ.. ಅಶೋಕ್ ಕೈಗೆ ಬಂದ ಮಂಡ್ಯ ಉಸ್ತುವಾರಿ : ಸಿಎಂ ಈ ನಿರ್ಧಾರಕ್ಕೆ ಕಾರಣವೇನು..?

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ರಾಜಕೀಯ ಕಣ ಸಿಕ್ಕಾಪಟ್ಟೆ ಬ್ಯುಸಿಯಾಗಿದೆ. ಇಷ್ಟು ದಿನ ಜೆಡಿಎಸ್ ಪ್ರಾಬಲ್ಯ ಇರುವಡೆಗೆ ಸೀರಿಯಸ್ ಆಗಿ ಕಣ್ಣು ಹಾಯಿಸದ ಬಿಜೆಪಿ ಈ ಬಾರಿ ಆ ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣತೊಟ್ಟಿದೆ. ಹೀಗಾಗಿ ಹಳೆ ಮೈಸೂರು ಭಾಗದಲ್ಲಿ ಓಡಾಟ ಜೋರಾಗಿ ನಡೆಯುತ್ತಾ ಇದೆ.

ಹೇಳಿ ಕೇಳಿ ಹಳೆ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆ ಇದ್ದಂತೆ. ಇಲ್ಲಿ ಜೆಡಿಎಸ್ ಗೆಲುವು ಖಚಿತವಾಗಿದೆ. ಆದರೆ ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿಯಾಗಿ, ಪ್ರಚಾರ ಕಾರ್ಯ ಕೂಡ ನಡೆಸಿದ್ದಾರೆ. ಯಾರೊಂದಿಗೂ ಒಪ್ಪಂದಗಳು ಬೇಡ, ಸ್ವತಂತ್ರವಾಗಿ ಪಕ್ಷ ಸ್ಥಾಪನೆ ಮಾಡಬೇಕೆಂಬ ನುಡಿಯನ್ನು ನುಡಿದು ಹೋಗಿದ್ದಾರೆ.

ಅಮಿತ್ ಶಾ ಅವರ ಮಾತಿನಿಂದ ಸಮ್ಮಿಶ್ರ ಮಾಡಿಕೊಳ್ಳುವುದು ಡೌಟ್ ಎಂದೇ ಭಾವಿಸಲಾಗಿದೆ. ಬಳಿಕ ಬಿಜೆಪಿ ಎಚ್ಚರವಹಿಸಿದೆ. ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಗೆಲ್ಲುವುದಕ್ಕೆ ಏನೆಲ್ಲಾ ಮಾಡಬೇಕು ಎಂಬ ಲೆಕ್ಕಚಾರ ಹಾಕುವುದಕ್ಕೆ ಶುರು ಮಾಡಿದೆ. ಅದರ ಭಾಗವಾಗಿಯೇ ಇಂದು ಮಂಡ್ಯ ಉಸ್ತುವಾರಿಯನ್ನು ಬದಲಾಯಿಸಿದ್ದಾರೆ.

ಈ ಹಿಂದೆ ಸಚಿವ ಗೋಪಾಲಯ್ಯ ಅವರನ್ನು ಮಂಡ್ಯ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಈ ಭಾಗದಲ್ಲಿ ಒಕ್ಕಲಿಗರ ಸಂಖ್ಯೆ ಅಧಿಕವಾಗಿರುವ ಕಾರಣ ಈಗ ಉಸ್ತುವಾರಿಯನ್ನು ಗೋಪಾಲಯ್ಯ ಕೈಯಿಂದ ತೆಗೆದುಕೊಂಡು ನೇರವಾಗಿ ಸಚಿವ ಆರ್ ಅಶೋಕ್ ಕೈಗೆ ಇಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!