Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕನ್ನಡಿಗ ರೋಹನ್ ಬೋಪಣ್ಣಗೆ 50 ಲಕ್ಷ ಬಹುಮಾನ ಘೋಷಿಸಿದ ಸಿದ್ದು ಸರ್ಕಾರ

---Advertisement---

 

ಬೆಂಗಳೂರು: ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ ರೋಹನ್ ಬೋಪಣ್ಣ. ಅವರ ಸಾಧನೆಯನ್ನು ಗುರುತಿಸಿ, ಸಿಎಂ ಸಿದ್ದರಾಮಯ್ಯ ಅವರು ಇಂದು ಸನ್ಮಾನ ಮಾಡಿದ್ದಾರೆ. ಆಸ್ಟ್ರೇಲಿಯಾ ಓಪನ್ ಪುರುಷರ ಡಬಲ್ಸ್ ಫೈನಲ್ ನಲ್ಲಿ ಕನ್ನಡಿಗ ರೋಹನ್ ಬೋಪಣ್ಣ ವಿಶ್ವ ದಾಖಲೆ ಬರೆದಿದ್ದಾರೆ. ಹೀಗಾಗಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇದೀಗ ಸರ್ಕಾರದಿಂದ ರೋಹನ್ ಅವರನ್ನು ಗೌರವಿಸಿ, ಬಹುಮಾನದ ಚೆಕ್ ಅನ್ನು ವಿತರಣೆ ಮಾಡಿದ್ದಾರೆ.

ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ @rohanbopanna ಅವರನ್ನು ಭೇಟಿಯಾಗಿ ಅಭಿನಂದಿಸಿ, 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದೆ. ಸಚಿವರಾದ @PriyankKharge, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸರ್ಕಾರದಿಂದ ಬಹುಮಾನ ಘೋಷಣೆ ಮಾಡಿದ್ದು, ರೋಹನ್ ಅವರನ್ನು ಗೌರವಿಸಿದೆ. ಶಾಲು ಹೊದಿಸಿ, ಹೂವಿನ ಹಾರ ಹಾಕಿ, ಪೇಟ ಧರಿಸಿ ಸನ್ಮಾನ ಮಾಡಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯರವರ ಜೊತೆಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದು, ಶುಭಕೋರಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment