ಸುದ್ದಿಒನ್,ಬೆಂಗಳೂರು,ಮೇ.22: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಕುರಿತು ಕರ್ನಾಟಕ ಸರ್ಕಾರವು ಮಹತ್ವದ ನಡವಳಿಗಳನ್ನು ಹೊರಡಿಸಿದೆ.
2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಒಟ್ಟು 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿತ್ತು.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಿ ಅದರಂತೆ ಹೊಸ ಆದೇಶವನ್ನು ಹೊರಡಿಸಿದೆ.
2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿದೆ. ಈ ಅನುಮೋದನೆಯ ಪ್ರಕಾರ ಪ್ರಾಥಮಿಕ ಶಾಲೆಗಳಿಗೆ 40,000 ಅತಿಥಿ ಶಿಕ್ಷಕರು ಹಾಗೂ ಪ್ರೌಢಶಾಲೆಗಳಿಗೆ 11,000 ಅತಿಥಿ ಶಿಕ್ಷಕರು ಸೇರಿದಂತೆ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸಹಮತಿಸಲಾಗಿದೆ.
ಮುಂದುವರೆದು, 2026-27ನೇ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳಲಾಗುವ ಈ ಒಟ್ಟು 51,000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರುಗಳ ಜಿಲ್ಲಾ ಮತ್ತು ತಾಲ್ಲೂಕುವಾರು ವಿವರಗಳೊಂದಿಗಿನ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖೆಗೆ ಸೂಚಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















