Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಆಸ್ಪತ್ರೆ ವೈದ್ಯರು ಸಹಿ ಹಾಕಿ ಬೇರೆ ಕಡೆ ಡ್ಯೂಟಿ ಮಾಡ್ತಾರೆ : ಲಕ್ಷ್ಮಣ ಸವದಿ ಪ್ರಶ್ನೆಗೆ ಸುಧಾಕರ್ ಏನಂದ್ರು..?

Facebook
Twitter
Telegram
WhatsApp

ಬೆಳಗಾವಿ : ಇಂದಿನಿಂದ 10 ದಿನಗಳ ಕಾಲ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಸರ್ಕಾರಿ ವೈದ್ಯರ ಬಗ್ಗೆ ಮಾತನಾಡಿದ್ದಾರೆ. ಸರ್ಕಾರಿ ವೈದ್ಯರು ಬೆಳಗ್ಗೆ ಆಸ್ಪತ್ರೆಗೆ ಬಂದು ಸಹಿ ಹಾಕ್ತಾರೆ. ಆದ್ರೆ ಆ ಬಳಿಕ ಅವರ ಖಾಸಗಿ ಆಸ್ಪತ್ರೆಗೆ ಹೋಗಿ ಡ್ಯೂಟಿ ಮಾಡ್ತಾರೆ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಸರ್ಕಾರಿ ವೈದ್ಯರು ರೋಗಿಗಳಿಗೆ ತಮ್ಮ ಖಾಸಗಿ ಆಸ್ಪತ್ರೆಗಳಿಗೆ ಬರುವಂತೆ ಸೂಚಿಸುತ್ತಾರೆ. ಇದಕ್ಕೆ ಸರ್ಕಾರದ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಲಕ್ಷ್ಮಣ ಸವದಿ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಧಾಕರ್, ಮುಂದಿನ ದಿನಗಳಲ್ಲಿ ಅಂಥಹ ವೈದ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಗ್ರಾಮೀಣ ಪ್ರದೇಶದಲ್ಲಿ ಈ ರೀತಿ ಆಗುತ್ತಿಲ್ಲ. ಸರಿಯಾದ ರೀತಿಯಲ್ಲಿ ಹಾಜರಾತಿ ನಡೆಯುತ್ತಿದೆ. ಕೆಲವು ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿದ್ದುಕೊಂಡು ಖಾಸಗಿ ಆಸ್ಪತ್ರೆಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಡ್ಯೂಟಿ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲೆ ಇರಬೇಕು. ಕೆಲಸದ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದದ್ದು ತಿಳಿದರೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ಗ್ರಾಮೀಣ ಭಾಗದಲ್ಲಿ ಈ ರೀತಿ ಆಗುತ್ತಿಲ್ಲ. ಸರಿಯಾಗಿ ಕೆಲಸ ಮಾಡುತಚತಿದ್ದಾರೆ. ಬೆಳಗ್ಗೆ 10.30 ರಿಂದ ಸಂಜೆ 4 ರ ತನಕ ಆಸ್ಪತ್ರೆಯಲ್ಲೆ ಇರಬೇಕು. ಈ ವೇಳೆ ವೈದ್ಯರಿಗೆ ನೀಡಿರುವ ವಸತಿ ಗೃಹದಲ್ಲೇ ಇರಬೇಕು. ಅದನ್ನ ಮೀರಿದವರಿಗೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!