Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಓ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ, ಗಡಿಪಾರಿಗೆ ಸರ್ಕಾರಿ ನೌಕರರ ಸಂಘ ಆಗ್ರಹ

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ಫೆ.15) : ಚಳ್ಳಕೆರೆ ಇಓ ಮಡಗಿನ ಬಸಪ್ಪ ಅವರ ಮೇಲೆ ನಡೆಸಿರುವ ಹಲ್ಲೆ ಖಂಡಿಸಿ ಸರ್ಕಾರಿ ನೌಕರರ ಸಂಘದವರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೌಕರರ ಸಂಘ, ಕರ್ನಾಟಕ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ನೌಕರರ ಸಂಘಗಳಿಂದ ಬೃಹತ್ ಪ್ರತಿಭಟನೆ ಮೂಲಕ ನ್ಯಾಯಕ್ಕಾಗಿ ಹೋರಾಟ ಎಂದು ಘೋಷಣೆಗಳನ್ನು ಕೂಗಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಸರ್ಕಾರಿ ನೌಕರರ ಮೇಲೆ ಪದೇ ಪದೇ ಹಲ್ಲೆಗಳು ನಡೆಯುತ್ತಿದ್ದು ಸರ್ಕಾರಿ ನೌಕರರು ಕಾರ್ಯನಿರ್ವಹಿಸುವುದು ಕಷ್ಟವಾಗಿದೆ. ಜಿಲ್ಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲೂ ಸಹ ಲೋಪವಾಗದಂತೆ ಅವರಿಗೆ ಶಿಕ್ಷೆಗೆ ಒಳಪಡಿಸಬೇಕಿದೆ.

ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ  ಹಲ್ಲೆ ಮಾಡಿರುವ ಆರೋಪಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ,  ಇಂತಹ ಘಟನೆಗಳು ಮರು ಕಳಿಸದಂತೆ ಕಾನೂನು ಕ್ರಮ ಜರುಗಿಸಿ ಅಧಿಕಾರಿಗಳು ಶಾಂತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಮನವಿ ಮಾಡಿದ್ದಾರೆ.

ಇಓ ರವರ ಮೇಲೆ ಹಲ್ಲೆ ಮಾಡಿದ ಚುನಾಯಿತ  ಪ್ರತಿನಿಧಿಗಳು ಮುಂದಿನ ದಿನದಲ್ಲಿ ಚುನಾವಣೆಗೆ ಸ್ಫರ್ದೆ ಮಾಡದಂತೆ ಆದೇಶವನ್ನು ನೀಡಬೇಕಿದೆ. ಇಂದಿನ ದಿನಮಾನದಲ್ಲಿ ಸರ್ಕಾರಿ ನೌಕರರು ಶಾಂತಿಯಿಂದ ಕೆಲಸವನ್ನು ಮಾಡುವಂತ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ ಈ ರೀತಿಯಾದ ಹಲ್ಲೆಯನ್ನು ಮಾಡುವವರನ್ನು ಶಿಕ್ಷೆಗೆ ಒಳಪಡಿಸಬೇಕಿದೆ ಎಂದು ಮಂಜುನಾಥ್ ಒತ್ತಾಯಿಸಿದರು.

ಕರ್ನಾಟಕ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಮಾತನಾಡಿ, ಕುಲಕ್ಷ ಕಾರಣಕ್ಕಾಗಿ ಚಳ್ಳಕೆರೆ ಇಓ ಮೇಲೆ ಪಂಚಾಯಿತಿಯ ಚುನಾಯಿತ ಪ್ರತಿನಿಧಿಯೊರ್ವರು ಹಲ್ಲೆ ಮಾಡಿದ್ದಾರೆ. ಇವರ ಅಪರಾಧವನ್ನು ಯಾವುದೇ ಒತ್ತಡಕ್ಕೂ ಮಣೀಯದೆ ಅವರನ್ನು ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಿದೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವವರೆಗೂ ನಮ್ಮ ಹೋರಾಟವನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ, ಪಂಚಾಯಿತಿಯ ಕೆಲಸವನ್ನು ಬಹಿಷ್ಕಾರ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

ಪಂಚಾಯಿತಿ ಎಂದ ಮೇಲೆ ವಾಟಾರ್‍ಮಾನ್‍ನಿಂದ ಹಿಡಿದು ಇಓವರೆಗೂ ಬರುತ್ತಾರೆ. ಕೆಲಸ ಮಾಡುವವರ ಮೇಲೆ ಈ ರೀತಿಯಾದ ಹಲ್ಲೆ ನಡೆದರೇ ಹೇಗೆ, ಹಲ್ಲೆ ಮಾಡಿದವರನ್ನು ಗೊಂಡಾ ಕಾಯ್ದೆಯಡಿ ಜಾರಿ ಮಾಡಿ ಬಂಧಿಸಬೇಕಿದೆ. ಮುಂದಿನ ದಿನಮಾನದಲ್ಲಿ ಈ ರೀತಿಯಾದ ಪ್ರಕರಣಗಳು ಆಗದಂತೆ ತಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕಿದೆ. ರಾಜ್ಯದಲ್ಲಿ ಪ್ರತಿ ದಿನ ಈ ರೀತಿಯಾದ ಹಲ್ಲೆಗಳು ನಿರಂತರವಾಗಿ ನಡೆಯುತ್ತಿದೆ. ಇಲ್ಲಿ ಕೆಲವು ಮಾತ್ರ ಪೋಲಿಸ್ ಠಾಣೆಯಲ್ಲಿ ನೊಂದಾಣಿಯಾಗುತ್ತದೆ ಉಳಿದವೂ ನೊಂದಾಣಿಯಾಗದೇ ಇರುವ ಪ್ರಕರಣಗಳು ಹಲವಾರು ಇವೆ. ಇಓ ಮೇಲೆ ಹಲ್ಲೆ ಮಾಡಿದಂತ ಚುನಾಯುತ ಪ್ರತಿನಿಧಿಯ ಕೆಡಿಪಿ ಸದಸತ್ವನ್ನು ಈ ಅಧಿವೇಶನದಲ್ಲಿಯೇ ರದ್ದು ಮಾಡುವಂತ ಆದೇಶವನ್ನು ಸರ್ಕಾರ ಹೊರಡಿಸಬೇಕಿದೆ ಹಾಗೇಯೇ ಅವರ ಮೇಲೆ ರೌಡಿ ಶೀಟರ್‍ನ್ನು ಜಾರಿ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!