ಬೆಂಗಳೂರು.ಜುಲೈ.17: ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಹಾಗೂ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಜುಲೈ 14, 2026 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ (ಆಡಳಿತ) ಬಿ.ಕೆ. ಮಮತಾ ರಾಣಿ ಅವರು ಈ ಮಹತ್ವದ ಆದೇಶವನ್ನು (ಆದೇಶ ಸಂಖ್ಯೆ: ಇಪಿ 53 ಡಿಪಿಇ 2026) ಹೊರಡಿಸಿದ್ದಾರೆ. ಆರ್ಥಿಕ ಇಲಾಖೆಯ ಸಹಮತಿಯ ಮೇರೆಗೆ ಈ ನೇಮಕಾತಿಗೆ ಹಸಿರು ನಿಶಾನೆ ಸಿಕ್ಕಿದೆ.
ಕಲ್ಯಾಣ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕೇತರ ಜಿಲ್ಲೆಗಳ ಹುದ್ದೆಗಳ ವರ್ಗೀಕರಣದ ಸಂಪೂರ್ಣ ವಿವರ ಈ ಕೆಳಗಿನಂತಿದೆ:
1. ಕಲ್ಯಾಣ ಕರ್ನಾಟಕ ಪ್ರದೇಶ (Kalyana Karnataka) – ಒಟ್ಟು 6,967 ಹುದ್ದೆಗಳು
ಪದವೀಧರ ಪ್ರಾಥಮಿಕ ಶಿಕ್ಷಕರು (GPT): 3,228
ಸಹ ಶಿಕ್ಷಕರು (Assistant Master – AM): 2,214
ಪ್ರಾಥಮಿಕ ಶಾಲಾ ಶಿಕ್ಷಕರು (PST): 800
ದೈಹಿಕ ಶಿಕ್ಷಣ ಶಿಕ್ಷಕರು (PET): 425
ಗಣಕವಿಜ್ಞಾನ ಶಿಕ್ಷಕರು (Computer Science Teacher): 300
2. ಕಲ್ಯಾಣ ಕರ್ನಾಟಕೇತರ ಪ್ರದೇಶ (Non-Kalyana Karnataka) – ಒಟ್ಟು 8,033 ಹುದ್ದೆಗಳು
ಪದವೀಧರ ಪ್ರಾಥಮಿಕ ಶಿಕ್ಷಕರು (GPT): 5,272
ಸಹ ಶಿಕ್ಷಕರು (Assistant Master – AM): 2,286
ಪ್ರಾಥಮಿಕ ಶಾಲಾ ಶಿಕ್ಷಕರು (PST): 100
ದೈಹಿಕ ಶಿಕ್ಷಣ ಶಿಕ್ಷಕರು (PET): 175
ಗಣಕವಿಜ್ಞಾನ ಶಿಕ್ಷಕರು (Computer Science Teacher): 200
ಹುದ್ದೆಗಳ ಒಟ್ಟು ಮೊತ್ತ:
ರಾಜ್ಯಾದ್ಯಂತ ಒಟ್ಟು 15,000 ಶಿಕ್ಷಕರ ನೇಮಕಾತಿ ನಡೆಯಲಿದ್ದು, ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಂಹಪಾಲು (6,967 ಹುದ್ದೆಗಳು) ಸಿಕ್ಕಿದೆ. ಶಾಲಾ-ಕಾಲೇಜುಗಳಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಈ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇಲಾಖೆಯು ಶೀಘ್ರದಲ್ಲೇ ಇದಕ್ಕೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಪ್ರಕಟಿಸಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












