ಹಿರಿಯೂರು, ಸೆಪ್ಟೆಂಬರ್.03 : ತಾಲ್ಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡುತ್ತಿದ್ದು, ಅಂಗಡಿ ಮುಂಭಾಗದಲ್ಲಿ ಒಂದು ಚೀಲ ಗೊಬ್ಬರಕ್ಕೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದ್ದು ಅಧಿಕಾರಿಗಳು ರೈತರ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಬಿಜೆಪಿ ತಾಲೂಕ ಅಧ್ಯಕ್ಷಕ್ಕೆ ಅಭಿನಂದನ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ತಾಲೂಕಿನಲ್ಲಿ ಇತ್ತಿಚೆಗಷ್ಟೇ ಸುರಿದ ಮಳೆಯಿಂದ ತೇವಾಂಶ ಹೆಚ್ಚಿದೆ. ಬೆಳೆಗಳಿಗೆ ರೋಗ ಬಾಧಿಸುತ್ತಿದೆ ರೋಗ ನಿಯಂತ್ರಣಕ್ಕಾಗಿ ರೈತರು ಗೊಬ್ಬರ ಮೊರೆ ಹೋಗುತ್ತಿದ್ದಾರೆ. ಏಕೈಕ ಚೀಲ ಗೊಬ್ಬರ ಕೊಳ್ಳಲು ಅಂಗಡಿ ಮುಂದೆ ಕಾಯುವ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಯೂರಿಯಾ ಗೊಬ್ಬರ ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದರು.
ಒಂದು ಅಥವಾ ಎರಡು ಲಾರಿ ಯೂರಿಯಾ ಬಂದಿರುವುದನ್ನು ತಿಳಿದ ರೈತರು ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದು ಮಳೆ, ಗಾಳಿ ಎನ್ನದೇ ಬೆಳ್ಳಂ ಬೆಳಿಗ್ಗೆಯೇ ರೈತರು ಬಂದು ನಗರದ ಸುಗ್ಗಿ ಟ್ರೇಡರ್ಸ್ ಹಾಗೂ ಇನ್ನಿತರ ಅಂಗಡಿಗಳ ಮುಂದೆ ನಿಲ್ಲುತ್ತಿದ್ದು, ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ. ಜೊತೆಗೆ ಕ್ಷೇತ್ರದ ಸಚಿವರು ಕೂಡ ರೈತರಿಗೆ ಗೊಬ್ಬರ ಪೂರೈಕೆ ಮಾಡುವಲ್ಲಿ ಅಸಡ್ಡೆ ತೋರಿದ್ದಾರೆ. ಜೊತೆಗೆ ಕೃಷಿ ಸಚಿವರ ಜೊತೆ ಮಾತಾಡಿ ಹೆಚ್ಚು ಗೊಬ್ಬರವನ್ನು ಕ್ಷೇತ್ರಕ್ಕೆ ತರಿಸಿಕೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆ ಎಂದು ಕಿಡಿಕಾರಿದರು.


