Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೌರ ಕಾರ್ಮಿಕರ ಬದುಕು ಸುಧಾರಣೆಗೆ ಸರ್ಕಾರಕ್ಕೆ ಕಾಳಜಿಯಿದೆ : ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ(ಕೋಟೆ)

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ: ಪೌರ ಕಾರ್ಮಿಕರು ಮಾಡುವ ಕೆಲಸವನ್ನು ಬೇರೆ ಯಾರಿಂದಲೂ ಮಾಡಲು ಸಾಧ್ಯವಿಲ್ಲ. ಹಾಗಾಗಿ ಮೂಲ ಸೌಲಭ್ಯಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿಗಳೆ ಹೇಳಿದ್ದಾರೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ(ಕೋಟೆ) ಹೇಳಿದರು.

ನಗರಸಭೆಗೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಪೌರ ಕಾರ್ಮಿಕರು ಹಾಗೂ ದಲಿತ ಮುಖಂಡರುಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲಾಡಳಿತ, ನಗರಸಭೆ ಆಯುಕ್ತರ ಹಂತದಲ್ಲಿ ಸಿಗುವ ಸೌಲಭ್ಯಗಳು ದೊರಕಲಿ. ಉಳಿದಂತೆ ಸರ್ಕಾರದ ಮಟ್ಟದಲ್ಲಿ ಸಿಗುವ ಸೌಲತ್ತುಗಳನ್ನು ಒದಗಿಸುವಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಪೌರ ಕಾರ್ಮಿಕರಿಗೆ ಅಗತ್ಯವಿರುವ ಮೂಲ ಸೌಲಭ್ಯಗಳ ಸಂಬಂಧ ಒಂದು ತಿಂಗಳೊಳಗೆ ವರದಿ ಕೊಡಿ ಎಂದಿದ್ದಾರೆ. ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಪ್ರತಿನಿತ್ಯವು ನಗರ ಸ್ವಚ್ಚತೆಯಲ್ಲಿ ತೊಡಗುವ ಪೌರ ಕಾರ್ಮಿಕರಿಗೆ 20 ರೂ.ಗೆ ಬೆಳಗಿನ ಉಪಹಾರ ನೀಡಲಾಗುತ್ತಿತ್ತು. ಈಗ ಅದನ್ನು ಐವತ್ತು ರೂ.ಗಳಿಗೆ ಏರಿಸಿ ತಿಂಡಿ ಜೊತೆ ಒಂದು ಬಾಟಲ್ ನೀರನ್ನು ಕೊಡಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು.

ಚಿಕ್ಕಬಳ್ಳಾಪುರದಲ್ಲಿ ಪೌರ ಕಾರ್ಮಿಕರಿಗೆ ನಿವೇಶನಗಳನ್ನು ನೀಡಿರುವುದನ್ನು ಅಲ್ಲಿನ ಜಿಲ್ಲಾಧಿಕಾರಿ ಜೊತೆ ಹೋಗಿ ವೀಕ್ಷಿಸಿದ್ದೇನೆ. ಅದೇ ರೀತಿ ರಾಜ್ಯದಲ್ಲಿರುವ ಪೌರ ಕಾರ್ಮಿಕರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ. ಕಮಿಟಿ ರಚಿಸಿಕೊಂಡು ಐದಾರು ರಾಜ್ಯಗಳಲ್ಲಿ ಪ್ರವಾಸ ಮಾಡಿ ಅಲ್ಲಿನ ಪೌರ ಕಾರ್ಮಿಕರ ಸ್ಥಿತಿಗತಿ ಹಾಗೂ ಅಲ್ಲಿ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯುತ್ತೇನೆ. ಒಟ್ಟಾರೆ ಪೌರ ಕಾರ್ಮಿಕರ ಬದುಕು ಸುಧಾರಣೆಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ದಲಿತ ಮುಖಂಡ ಡಿ.ದುರುಗೇಶ್ ನಗರಸಭೆಯಲ್ಲಿ ಪೌರ ಕಾರ್ಮಿಕರ ಸಂಖ್ಯೆ ತುಂಬಾ ಕಡಿಮೆಯಿದೆ. ಆದರೂ ಇರುವ ಪೌರ ಕಾರ್ಮಿಕರುಗಳನ್ನೇ ಬಳಸಿಕೊಂಡು ನಗರಸಭೆ ಪೌರಾಯುಕ್ತರು ನಗರ ಸ್ವಚ್ಚವಾಗಿಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದಾಗ ರಾಜ್ಯದಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಪೌರ ಕಾರ್ಮಿಕರ ಹುದ್ದೆ ಖಾಲಿಯಿದೆ. ವಿಶೇಷವಾಗಿ ಪರಿಗಣಿಸಿ ಪೌರ ಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದೇನೆ ಎಂದು ತಿಳಿಸಿದ ಎಂ.ಶಿವಣ್ಣ(ಕೋಟೆ) ಪೌರ ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗುವುದು ಬೇಡ. ಅವರ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ಕೊಡಬೇಕಿದೆ. ಮಹಿಳಾ ಪೌರ ಕಾರ್ಮಿಕರನ್ನು ಲೋಡರ್ಸ್ ಕೆಲಸಕ್ಕೆ ತೆಗೆದುಕೊಳ್ಳಬಾರದು ಎಂದು ಪೌರಾಯುಕ್ತರಿಗೆ ಹೇಳಿದರು.

ಯೋಜನಾ ನಿರ್ದೇಶಕ ಸತೀಶ್‍ರೆಡ್ಡಿ, ನಗರಸಭೆ ಪೌರಾಯುಕ್ತರಾದ ಹನುಮಂತರಾಜು, ಸಮಾಜ ಕಲ್ಯಾಣಾಧಿಕಾರಿ ಮಮತ, ದಲಿತ ಮುಖಂಡರುಗಳಾದ ರಾಜಣ್ಣ, ಸ್ಲಂ ಜನಾಂದೋಲನ-ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ಮಂಜಣ್ಣ, ಪರಿಸರ ಇಂಜಿನಿಯರ್ ಜಾಫರ್, ಜೂನಿಯರ್ ಇಂಜಿನಿಯರ್ ಕಿರಣ್, ಹೆಲ್ತ್ ಇನ್ಸ್‍ಪೆಕ್ಟರ್‍ಗಳಾದ ಬಾಬುರೆಡ್ಡಿ, ಸರಳ, ಭಾರತಿ ಇನ್ನು ಮುಂತಾದವರು ಸಭೆಯಲ್ಲಿ ಹಾಜರಿದ್ದರು.

ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಪೌರ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಲಾಯಿತು.
ಅಂಬೇಡ್ಕರ್ ಜಯಂತಿಯಂದು ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್‍ನಲ್ಲಿ ಉತ್ತಮ ಪೌರಕಾರ್ಮಿಕರೆಂದು ನಗದು ಬಹುಮಾನ ಪಡೆದ ನಗರಸಭೆಯ ಇಬ್ಬರು ಪೌರ ಕಾರ್ಮಿಕರಾದ ತಿಮ್ಮಕ್ಕ, ಬಸವರಾಜಪ್ಪ ಇವರುಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!