Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಶಿಕ್ಷಕರಿಗೆ ಇನ್ಮುಂದೆ ಹೆಸರಿನ ಮುಂದೆ ‘Tr’ ಶೀರ್ಷಿಕೆ ಬಳಸಲು ಅನುಮತಿ ನೀಡಿ ಸರ್ಕಾರ ಮಹತ್ವದ ಆದೇಶ

---Advertisement---

ಬೆಂಗಳೂರು:  ವೈದ್ಯರು ತಮ್ಮ ಹೆಸರಿನ ಮುಂದೆ ‘Dr’ ಬಳಸುವಂತೆ, ಇನ್ಮುಂದೆ ರಾಜ್ಯದ ಶಿಕ್ಷಕರು ತಮ್ಮ ಹೆಸರಿನ ಪೂರ್ವದಲ್ಲಿ ‘Tr’ (Teacher – ಶಿಕ್ಷಕ) ಎಂಬ ಶೀರ್ಷಿಕೆಯನ್ನು ಹೆಮ್ಮೆಯಿಂದ ಬಳಸಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಉತ್ತಮ ಸಮಾಜ ನಿರ್ಮಾಣ, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ವೈಜ್ಞಾನಿಕ ಮನೋಭಾವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಕರ ಶ್ರಮ ಅಪಾರ. ಈ ಅಮೂಲ್ಯ ಕೊಡುಗೆಯನ್ನು ಗೌರವಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

 ‘Tr’ ಎಂಬುದು ಕೇವಲ ಎರಡು ಅಕ್ಷರಗಳಾಗಿರದೆ, ಇತರರ ಭವಿಷ್ಯ ರೂಪಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿಕ್ಷಕರಿಗೆ ಸಮಾಜ ನೀಡುವ ಮಾನ್ಯತೆ ಮತ್ತು ಅವರ ಜೀವಿತಾವಧಿಯ ಸೇವೆಯ ಪ್ರತೀಕವಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ) ಎಸ್. ಪ್ರಕಾಶ್ ಅವರು ದಿನಾಂಕ 05.09.2026 ರಂದು ಅಧಿಕೃತ ಆದೇಶ (ಸಂಖ್ಯೆ: ಇಪಿ 216 ಎಸ್ಎಲ್ಬಿ 2026) ಹೊರಡಿಸಿದ್ದು, ರಾಜ್ಯಪಾಲರ ಆಜ್ಞಾನುಸಾರ ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ.

ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಹಂತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಶಿಕ್ಷಕರಿಗೆ ಈ ಆದೇಶದಿಂದ ವೃತ್ತಿಪರ ಮನ್ನಣೆ ದೊರೆತಂತಾಗಿದೆ.

Join WhatsApp

Join Now

Join Telegram

Join Now