Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ, ಡಿಕೆಶಿ ಇಬ್ಬರಿಂದಾನೆ ಸರ್ಕಾರ ರಚನೆಯಾಗಿಲ್ಲ : ಪ್ರಣವಾನಂದ ಸ್ವಾಮೀಜಿ

---Advertisement---

 

ಬೆಂಗಳೂರು: ಬಿಕೆ ಹರಿಪ್ರಸಾದ್ ಬಳಿಕ ಇದೀಗ ಈಡಿಗ ಸಮುದಾಯದ ಪ್ರಣಾವನಂದ ಸ್ವಾಮೀಜಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೇವಲ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಂದ ಮಾತ್ರ ಸರ್ಕಾರ ಬಂದಿಲ್ಲ. ಹರಿಪ್ರಸಾದ್ ಕೂಡ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ. ಕೆಲಸ ಮಾಡಿದ್ದಾರೆ. ಅವರು ಕೂಡ ಸಿಎಂ ಆಗುವ ಅರ್ಹತೆಯನ್ನು ಹೊಂದಿದ್ದಾರೆ.

ಹರಿಪ್ರಸಾದ್ ಅವರನ್ನು ವಲಸಿಗರು ತುಳಿದಿಲ್ಲ. ಹೊರಗಡೆಯಿಂದ ಬಂದವರು ತುಳಿಯುತ್ತಿದ್ದಾರೆ. ನಮ್ಮ ಸಮುದಾಯವನ್ನು ಹೇಗೆ ಬೇಕೋ ಹಾಗೇ ಬಳಸಿಕೊಳ್ಳುತ್ತಿದ್ದಾರೆ. ನಮ್ಮದು ಅತಿ ದೊಡ್ಡ ಸಮುದಾಯ. ಮುಂದಿನ‌ ದಿನಗಳಲ್ಲಿ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ಈಡಿಗರ ಸಮಾವೇಶದಲ್ಲಿ ಒಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲು ಗೊತ್ತು, ಅದೇ ವ್ಯಕ್ತಿಯನ್ನು ಕಳಗೆ ಇಳಿಸೋದು ಗೊತ್ತು ಅನ್ನೋ ಮೂಲಕ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಮುಖ್ಯಂತ್ರಿ ಸಿದ್ದರಾಮಯ್ಯಗೆ ಪರೋಕ್ಷವಾಗಿ ಎಚ್ಚರಿಕೆಯನ್ನು ನೀಡಿದ್ದರು. ಹರಿಪ್ರಸಾದ್ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...