Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಣ್ಣನ್ ಗೆ ನೀಡಿದ್ದ ನೋಟೀಸ್ ವಾಪಾಸ್ ಪಡೆಯಲು ಸರ್ಕಾರ ಸೂಚನೆ..!

Facebook
Twitter
Telegram
WhatsApp

ಚಿಕ್ಕಮಗಳೂರು: ದೇವಾಲಯದ ಆದಾಯಕ್ಕಿಂತ ಹೆಚ್ಚಾಗಿ ಸಂಬಳ ನೀಡಲಾಗುತ್ತಿದೆ ಎಂಬ ಆರೋಪದಡಿ ಅರ್ಚಕ, ಹಿರಿಯ ಸಾಹಿತಿ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶೀಲ್ದಾರ್ ನೋಟೀಸ್ ನೀಡಿದ್ದರು. ಇದೀಗ ಈ ಸಂಬಂಧ ಸರ್ಕಾರದಿಂದಾನೇ ನೋಟೀಸ್ ವಾಪಸ್ ತೆಗೆದುಕೊಳ್ಳುವುದಕ್ಕೆ ಸೂಚನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ, ಈ ಬಗ್ಗೆ ನನಗೂ ಮಾಹಿತಿ ಇರಲಿಲ್ಲ. ಇದು ತಹಶಿಲ್ದಾರ್ ಅವರು ಮಾಡಿರುವ ಯಡವಟ್ಟು. ಇದರಲ್ಲಿ ಕಣ್ಣನ್ ಅವರದ್ದು ಏನು ತಪ್ಪಿಲ್ಲ, ತಹಶಿಲ್ದಾರ್ ಅವರು ದುಡ್ಡುಕೊಟ್ಟಿದ್ದಕ್ಕೆ ಅವರು ತೆಗೆದುಕೊಂಡಿದ್ದಾರೆ. ಕೂಡಲೇ ಆ ನೋಟೀಸ್ ವಾಪಾಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಮೂಲಗಳ ಪ್ರಕಾರ ಹೀರೆಮಗಳೂರು ಕಣ್ಣನ್ ಅವರಿಗೆ ತಿಂಗಳ ಸಂಬಳ 7,500 ರೂಪಾಯಿ ನೀಡಲಾಗಿತ್ತು. ಆದರೆ ದೇವಾಲಯದ ಆದಾಯ ಕಡಿಮೆ ಇದ್ದ ಕಾರಣಕ್ಕೆ ಬಳಿಕ 4,500 ರೂಪಾಯಿಗೆ ತರಲಾಗಿತ್ತು. ಇದೀಗ 4,500ರೂಪಾಯಿಯಂತೆ 10 ತಿಂಗಳ ಸಂಬಳ ಅಂದರೆ 4,74,000 ಹಣವನ್ನು ವಾಪಾಸ್ ನೀಡಬೇಕೆಂದು ತಹಶಿಲ್ದಾರ್ ನೋಟೀಸ್ ನೀಡಿದ್ದರು. ಇದು ಸರ್ಕಾರದ ಗಮನಕ್ಕೆ ಬರುತ್ತಿದ್ದಂತೆ, ಆ ಯಡವಟ್ಟನ್ನು ಸರಿ ಮಾಡುವ ಪ್ರಯತ್ನ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!