ಸುದ್ದಿಒನ್, ಹೊಳಲ್ಕೆರೆ, ಜುಲೈ. 22 : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಕೊಡುತ್ತಿದೆ. ಆದುದರಿಂದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಉತ್ತಮ ಎಂದು ಬಿಇಒ ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ಚಿತ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕೊಠಡಿ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರ ಮತ್ತು ಶಿಕ್ಷಣ ಇಲಾಖೆ ಕರ್ನಾಟಕದಲ್ಲಿ 4134 ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮವನ್ನು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ಯುಕೆಜಿ ಹಾಗೂ ಎಲ್. ಕೆ.ಜಿ. ಪ್ರಾರಂಭ ಮಾಡುವ ಭರವಸೆ ಇದೆ. ಆದುದರಿಂದ ಮಕ್ಕಳನ್ನುಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಸಮಾಜಸೇವಕರಾದ ಜಿ.ಎಂ.ಲವಕುಮಾರ್ ಮಾತನಾಡಿ, ಚಿತ್ರಹಳ್ಳಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದೇನೆ. ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡುತ್ತಿದ್ದೇವೆ. ಹೊಳಲ್ಕೆರೆ ಶಾಸಕರಾದ ಡಾ. ಎಂ ಚಂದ್ರಪ್ಪನವರು ಶಾಲೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಹಾಗೆಯೇ ಇಂದು ಕೂಡ ಎರಡು ಕೊಠಡಿಗೆ 20 ಲಕ್ಷದ ರೂಗಳನ್ನು ನೀಡಿದ್ದಾರೆ. ಚಿತ್ರಹಳ್ಳಿ ಗ್ರಾಮದ ಸುತ್ತಮುತ್ತಲಿರುವ ಯಾವುದೇ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರಿ ಶಾಲೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಈ ಶಾಲೆಯನ್ನು ದತ್ತು ಪಡಿತ್ತಿದ್ದೇನೆ. ಖಾಸಗಿ ಶಾಲೆಗಳಿಗೆ ಸೇರಿಸುವುದಕ್ಕಿಂತ ನಮ್ಮ ಸರ್ಕಾರಿ ಶಾಲೆಗೆ ಸೇರಿಸಿದರೆ ಉತ್ತಮ ಶಿಕ್ಷಣ ಸಿಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ದಿವ್ಯ ಜ್ಯೋತಿ, ಮುಖ್ಯೋಪಾಧ್ಯಾಯಿನಿ ಗಾಯತ್ರಿ ಪ್ರಭಾಕರ್, ಗ್ರಾಮ ಪಂಚಾಯತಿ ಸದಸ್ಯರಾದ ಜಿ.ಎಂ. ಕಾಂತರಾಜ್,, ಮಲ್ಲಿಕಾರ್ಜುನ್, ಮಂಜುನಾಥ್, ಎಂ ಆರ್ ನಾಗರಾಜ್ ಶಿಕ್ಷಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಇದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






