Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣ ಮಾತನ್ನು ಸರ್ಕಾರ ಪರಿಗಣಿಸಬೇಕು : ಶಾಸಕ ಯತ್ನಾಳ್

Facebook
Twitter
Telegram
WhatsApp

ಅಧಿಕಾರಿಗಳ ದಾಳಿಯಲ್ಲಿ ಅಂಬಿಕಾಪತಿ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ 40 ಕೋಟಿ ಹಣ. ಇದೀಗ ಅಂಬಿಕಾಪತಿ ಸಾವಿನ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೀಡಿರುವ ಹೇಳಿಕೆಯನ್ನು ಸರ್ಕಾರ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು. ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು.

ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!