Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೀಘ್ರದಲ್ಲಿಯೇ ಸರ್ಕಾರ ಪತನವಾಗಲಿದೆ : ಮಾಜಿ ಸಚಿವ ಮುರುಗೇಶ್ ನಿರಾಣಿ

Facebook
Twitter
Telegram
WhatsApp

ವಿಜಯಪುರ: ಲೋಕಸಭೆಯ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರಲ್ಲ ಅಂತ ಈಗಾಗಲೇ ಬಿಜೆಪಿ ನಾಯಕರು ಸಾಕಷ್ಟು ಬಾರಿ ಹೇಳಿದ್ದಾರೆ. ಇದೀಗ ಮಾಜಿ ಸಚಿವ ಮುರುಗೇಶ್ ನಿರಾಣಿ ಕೂಡ ಅದನ್ನೇ ಹೇಳಿದ್ದಾರೆ. ಅತಿ ಶೀಘ್ರದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ಭವಿಷ್ಯ ನುಡಿದಿದ್ದಾರೆ.

 

ವಿಜಯಪುರದಲ್ಲಿ ಮಾತನಾಡಿದ ಅವರು, ಹೈಕಮಾಂಎ್ ಜೊತೆಗೆ 50 ಜನ ಟಚ್ ನಲ್ಲಿದ್ದಾರೆ. ಡಿಸಿಎಂ ಸ್ಥಾನದ ಆಕಾಂಕ್ಷಿಗಳು, ಸಚಿವ ಸ್ಥಾನದ ಆಕಾಂಕ್ಷಿಗಳು, ಅಸಮಾಧಾನಿತ ಶಾಸಕರು ಹೀಗೆ 50 ಮಂದಿ ಹೈಕಮಾಂಡ್ ಟಚ್ ನಲ್ಲಿದ್ದಾರೆ. ಅವರೇ ಬಂದು ಬಾಗಿಲು ತಟ್ಟುತ್ತಿದ್ದಾರೆ. ನಾವಾಗಿ ಸರ್ಕಾರ ಕೆಡವಲ್ಲ. ತಾನಾಗಿಯೇ ಪತನವಾಗುತ್ತೆ. ಯಾವಾಗ ಪತನವಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ. ಕಾಂಗ್ರೆಸ್ ಮಾತನಾಡೋದು ಒಂದು, ಮಾಡೋದು ಇನ್ನೊಂದು. ಕಾಂಗ್ರೆಸ್ ನಲ್ಲಿ ಮೇಲ್ನೋಟಕ್ಕಷ್ಟೇ ಎರಡು ಬಣ ಇದೆ. ಆದರೆ ಒಳಗೆ ನಾಲ್ಕು ಬಣ ಇದೆ ಎಂದಿದ್ದಾರೆ.

ಸಿಎಂ ಸ್ಥಾನ ಕೇಳುತ್ತಿದ್ದಾರೆ, ನಾಲ್ಕು ಡಿಸಿಎಂಗಳಿಗೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಸರ್ಕಾರವೇ ಗೊಂದಲದಲ್ಲಿದೆ. ಈ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇದೆಯಾ ಎಂಬುದೇ ಗೊತ್ತಾಗುತ್ತಿಲ್ಲ. ಗ್ಯಾರಂಟಿ ಮೋಸದಿಂದ ಅಧಿಕಾರಕ್ಕೆ ಬಂದಿದ್ದಾರೆ. ಫ್ರೀ ಕರೆಂಟ್ ಅಂತ ಹೇಳಿ ಪವರ್ ಕಟ್ ಮಾಡುತ್ತಿದ್ದಾರೆ. ಮಹಿಳೆಯರಿಗೆ ಬಸ್ ಫ್ರೀ ಅಂದ್ರು, ಆಮೇಲೆ ಬಸ್ ಗಳನ್ನೇ ಕಡಿಮೆ ಮಾಡಿದ್ದಾರೆ. ರಾಜ್ಯದ 7 ಕೋಟಿ ಜನರಿಗೆ ಸರ್ಕಾರ ಮೋಸ ಮಾಡುತ್ತಿದೆ. ಹಿಂದಿನ ಸರ್ಕಾರದ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!