Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಕೇಸ್ ವಾಪಸ್ ಗೆ ಸರ್ಕಾರ ನಿರ್ಧಾರ : ಬಿಜೆಪಿ ನಾಯಕರ ವಿರೋಧ..!

ಡಿಕೆ ಶಿವಕುಮಾರ್
---Advertisement---

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಕೇಸನ್ನು ವಾಪಾಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಕ್ಯಾಬಿನೆಟ್ ನಲ್ಲಿ ಈ ನಿರ್ಧಾರ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಡಿಕೆಶಿ ವಿರುದ್ಧ ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಗಳಿವೆ. ವಿಚಾರಣೆಗೆ ತಡೆ ನೀಡುವುದಕ್ಕೆ ಕೋರ್ಟ್ ಕೂಡ ನಿರಾಕರಿಸಿದೆ. ಆದರೆ ಕೇಸ್ ವಾಪಾಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕೆ ನ್ಯಾಯ ಸಿಗಬೇಕು ಎಂದು ಮನವಿ ಮಾಡಿದ್ದಾರೆ.

ಮಾಜಿ ಸಚಿವ ಈಶ್ವರಪ್ಪ ಮಾತನಾಡಿ, ಸಚಿವ ಸಂಪುಟ ವಾಪಾಸ್ ತೆಗೆದುಕೊಂಡಿರುವುದು ಪ್ರಜಾ ಪ್ರಭುತ್ವಕ್ಕೆ ಮಾಡಿದ ಅಪಮಾನ ಇದು. ಕಳ್ಳ ಎಂದಿದ್ದರು ಕಳ್ಳನೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಿಬಿಐ ಕೇಸ್ ಹಾಕಿದ್ದಕ್ಕೆ ಕಾರಣ, 23 ಕೋಟಿಯಿಂದ 163 ಕೋಟಿಗೆ ಹೋಗಿದೆ. ನ್ಯಾಯಾಲಯಕ್ಕೂ ಹೋದ್ರು. ಆದರೆ ಅಲ್ಲಿಯೂ ಅರ್ಜಿ ತಿರಸ್ಕಾರಗೊಂಡಿದೆ. ಡಿಕೆಶಿ ಆಸ್ತಿ ಹೆಚ್ಚಳವಾಗಿದ್ದು ಡಿಕೆಶಿಗೂ ಗೊತ್ತು, ಸಿಎಂಗೂ ಗೊತ್ತು ಎಂದು ಕಿಡಿಕಾರಿದ್ದಾರೆ.

ಸಂಸದ ಬಿವೈ ರಾಘವೇಂದ್ರ ವಾಗ್ದಾಳಿ ನಡೆಸಿದ್ದು, ಎಂಥಾ ಪ್ರವೃತ್ತಿ ಇದು. ಈಗಾಗಲೇ ಹೈಕೋರ್ಟ್ ಮುಂದುವರೆಸುವ ತೀರ್ಮಾನಕ್ಕೆ ಬಂದಿದೆ. ಏಕಾಏಕಿ ಕ್ಯಾಬಿನೆಟ್ ನಲ್ಲಿ ಈ ರೀತಿಯ ತೀರ್ಮಾನವಾಗುತ್ತೆ. ಈ ರೀತಿ ತೀರ್ಮಾನ ಕಾನೂನು ಬಾಹಿರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment