Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಧಿವೇಶನದ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲು ರಾಜ್ಯಪಾಲರು ಹಿಂದೇಟು : ಕಾರಣವೇನು..?

---Advertisement---

ಬೆಂಗಳೂರು: ಈಚೆಗಷ್ಟೇ ವಿಶೇಷ ಅಧಿವೇಶನದ ಭಾಷಣ ಓದಲು ರಾಜ್ಯಪಾಲರು ಹಿಂದೇಟು ಹಾಕಿ, ಗದ್ದಲ ನಿರ್ಮಾಣ ಮಾಡಿದ್ದರು. ಇದೀಗ ಗಣರಾಜ್ಯೋತ್ಸವದ ಭಾಷಣ ಮಾಡುವುದಕ್ಕೂ ರಾಜ್ಯಪಾಲರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಪ್ರತಿ ವರ್ಷ ಕೂಡ ಗಣರಾಜ್ಯೋತ್ಸವದ ದಿನ ರಾಜ್ಯಪಾಲರು ಭಾಷಣವನ್ನ ಓದುತ್ತಾರೆ. ಈ ಭಾಷಣವನ್ನು ರಾಜ್ಯ ಸರ್ಕಾರವೇ ತಯಾರು ಮಾಡುತ್ತದೆ. ಆದರೆ ಈ ಬಾರಿ ರಾಜ್ಯ ಸರ್ಕಾರ ತಯಾರಿ ಮಾಡಿರುವ ಭಾಷಣವನ್ನು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಾರೆ.

ಅದಕ್ಕೆ ಕಾರಣ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಕುರಿತು ತೀವ್ರ ಟೀಕೆಗಳು ಇದಾವೆ ಎಂಬುದು ತಿಳಿದು ಬಂದಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಅನುದಾನ ಹಂಚಿಕೆಯಲ್ಲಿ ನಡೆಯುತ್ತಿರುವ ತಾರತಮ್ಯ,‌ ಮಲತಾಯಿ ಧೋರಣೆ ಸೇರಿದಂತೆ ಹಲವು ಅಂಶಗಳನ್ನು ಉಲ್ಲೇಖ ಮಾಡಲಾಗಿದೆ. ಈ ಅಂಶಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವಂತೆ ಇರುವ ಕಾರಣಕ್ಕೆ ರಾಜ್ಯಪಾಲರು ಅಂತಹ ಭಾಷಣವನ್ನು ಓದುವುದಿಲ್ಲ ಎನ್ನುತ್ತಿದ್ದಾರಂತೆ.

 

ಇನ್ನು ರಾಜ್ಯಪಾಲರಾದ ಗೆಹ್ಲೋಟ್ ಅವರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವ ಅಂಶಗಳಿದ್ದರೆ ಅದನ್ನು ಓದಲು ಸಾಧ್ಯವಿಲ್ಲ. ಸರ್ಕಾರ ತಿದ್ದುಪಡಿ ಮಾಡದೆ ಇದ್ದರೆ ನಾನೇ ಸಿದ್ಧಪಡಿಸಿದ ಭಾಷಣವನ್ನು ಓದಿ ಮುಗಿಸುತ್ತೇನೆ ಎಂದಿದ್ದಾರೆ. ಈಚೆಗಷ್ಟೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ವೇಳೆ ಸದ್ದು ಗದ್ದಲ ಹೆಚ್ಚಾಗಿತ್ತು. ಭಾಷಣದ ಕೆಲವು ಭಾಗಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ಮೊದಲೇ ಸೂಚನೆ ನೀಡಿದ್ದರು. ಆದರೆ ರಾಜ್ಯಪಾಲರಿಂದ ಭಾಷಣ ಓದಿಸಿಯೇ ಸಿದ್ಧ ಎಂದು ರಾಜ್ಯ ಸರ್ಕಾರ ಪಟ್ಟು ಹಿಡಿದಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...