Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಗೋವಿಂದ ಕಾರಜೋಳರವರ ಗೆಲುವು ನಿಶ್ಚಿತ : ಬಿ.ಕಾಂತರಾಜ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  :
ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ ಜೆಡಿಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ತಾಲ್ಲೂಕಿನ ಹದಿನೈದು ಪಂಚಾಯಿತಿಗಳಲ್ಲಿ ಮಂಗಳವಾರ ಬಿರುಸಿನ ಮತಯಾಚಿಸಿದರು.

ಜಾನುಕೊಂಡ, ಗೊಡಬನಹಾಳ್, ಅನ್ನೆಹಾಳ್, ಸೊಂಡೆಕೊಳ, ಹುಲ್ಲೂರು, ಹಿರೇಗುಂಟನೂರು, ಬೊಮ್ಮನಹಳ್ಳಿ, ಭೀಮಸಮುದ್ರ, ಸಿದ್ದಾಪುರ, ಐನಳ್ಳಿ, ಲಕ್ಷ್ಮಿಸಾಗರ, ಹಾಲಘಟ್ಟ, ಮಠದಕುರುಬರಹಟ್ಟಿ, ಚೋಳಘಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ. ಅಭ್ಯರ್ಥಿ ಪರ ಮತಯಾಚಿಸಿದ ಬಿ.ಕಾಂತರಾಜ್, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ. ಜೆಡಿಎಸ್. ಮೈತ್ರಿ ಮಾಡಿಕೊಂಡಿರುವುದರಿಂದ ಅಭ್ಯರ್ಥಿಯ ಗೆಲುವು ನಿಶ್ಚಿತ. ಕೇಂದ್ರದಲ್ಲಿ ಮೂರನೆ ಬಾರಿಗೆ ನರೇಂದ್ರಮೋದಿ ಪ್ರಧಾನಿಯಾಗಬೇಕಾಗಿರುವುದರಿಂದ ಗೋವಿಂದ ಕಾರಜೋಳರವರನ್ನು ಬಹುಮತಗಳಿಂದ ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಡಿ ಎಂದು ಮತದಾರರಲ್ಲಿ ವಿನಂತಿಸಿದರು.

ಜೆಡಿಎಸ್. ತಾಲ್ಲೂಕು ಘಟಕದ ಅಧ್ಯಕ್ಷ ಸಣ್ಣತಿಮ್ಮಣ್ಣ, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ವಿದ್ಯಾರ್ಥಿ ಘಟಕದ ಅಬ್ಬು ಹಾಗೂ ಜೆಡಿಎಸ್. ಕಾರ್ಯಕರ್ತರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...