KPTCL ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ : ವೇತನ ಹೆಚ್ಚಳಕ್ಕೆ ಒಪ್ಪಿಗೆ.. ನಾಳೆಯೇ ಪ್ರತಿಭಟನೆ ವಾಪಾಸ್..!

 

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರಿ ನೌಕರರ ಬೇಡಿಕೆಗಳು ಹೆಚ್ಚಾಗುತ್ತಾ ಹೋಗುತ್ತವೆ. ಪ್ರತಿಭಟನೆಯ ಕಾವು ಚುನಾವಣೆಗೆ ತಗಲಬಾರದು ಎಂಬ ಕಾರಣಕ್ಕೆ ಸರ್ಕಾರ ಕೂಡ ಅಸ್ತು ಎನ್ನುತ್ತೆ. ಈ ಕಾರಣಕ್ಕಾಗಿಯೆ ಪ್ರತಿಭಟನೆಗಳು ಜೋರಾಗುತ್ತವೆ. ಕಳೆದ ಹದಿನಾಲ್ಕು ದಿನದಿಂದ KPTCL ನೌಕರರು ಕೂಡ ಬೇಡಿಕೆ ಈಡೇರಿಸುವಂತೆ ಮುಷ್ಕರ ಕೈಗೊಂಡಿದ್ದರು, ಇಂದು ಕೊನೆಯ ದಿನವಾಗಿದ್ದ ಕಾರಣ ಸರ್ಕಾರ ಅಸ್ತು ಎಂದಿದೆ. ನಾಳೆಯೇ ನೌಕರರು ಕೂಡ ಮುಷ್ಕರವನ್ನು ವಾಪಾಸ್ ಪಡೆಯಲಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರು ವೇತನ ಹೆಚ್ಚಿಸುವಂತೆ ಆಗ್ರಹಿಸಿ, ಪ್ರತಿಭಟನೆ ಕೈಗೊಂಡಿದ್ದರು. ಇಂದು ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ನಾಳೆ ಎಲ್ಲಾ ಎಸ್ಕಾಂ ನೌಕರರು ಕೆಲಸಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಕರೆ ನೀಡಲಾಗಿತ್ತು. 50 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಈ ಹಿನ್ನೆಲೆ ಎಚ್ಚತ್ತುಕೊಂಡ ಸರ್ಕಾರ ಅವರ ಬೇಡಿಕೆ ಈಡೇರಿಕೆಗೆ ಅಸ್ತು ಎಂದಿದೆ.

ರಾಜ್ಯ ಸರ್ಕಾರದ ಎಲ್ಲಾ KPTCL ಮತ್ತು ಎಸ್ಕಾಂ ನೌಕರರ ವೇತನ ಪರಿಷ್ಕರಣೆ ಮಾಡಿದೆ. ಈಗಿನ ವೇತನದ ಮೇಲೆ ಶೇಕಡ 20ರಷ್ಟು ಹೆಚ್ಚಳ ಮಾಡಿದೆ. 2022ರ ಏಪ್ರಿಲ್ ನಿಂದ ಈ ಆದೇಶ ಅನ್ವಯವಾಗಲಿದೆ. ಹೀಗಾಗಿ ನೌಕರರು ನಾಳೆಯೇ ಮುಷ್ಕರ ವಾಪಾಸ್ ಪಡೆಯಲಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

34 minutes ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

2 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

2 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

2 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago